<p><strong>ಬೆಳಗಾವಿ:</strong> ‘ಮಕ್ಕಳ ಹಕ್ಕುಗಳ ಉಲ್ಲಂಘನೆ ಆಗದಂತೆ ನೋಡಿಕೊಳ್ಳುವ ಮೂಲಕ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಅವರಿಗೆ ತಲುಪಿಸಬೇಕು’ ಎಂದು ಮಕ್ಕಳ ಹಕ್ಕುಗಳ ಕಲ್ಯಾಣ ಸಮಿತಿ ಅಧ್ಯಕ್ಷೆ ಸಿಸ್ಟರ್ ಲೂರ್ಧ್ ಹೇಳಿದರು.</p>.<p>ಇಲ್ಲಿನ ಗಾಂಧಿ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆಯ ಮಕ್ಕಳ ಸಹಾಯವಾಣಿ ವತಿಯಿಂದ ಹಮ್ಮಿಕೊಂಡಿದ್ದ ‘ತೆರೆದ ಮನೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸರ್ಕಾರಿ ಶಾಲೆಯಲ್ಲಿ ಮೂಲ ಸೌಕರ್ಯಗಳ ಕೊರತೆ ಇದ್ದಲ್ಲಿ ಅವುಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸುವುದು ತೆರೆದ ಮನೆ ಕಾರ್ಯಕ್ರಮದ ಉದ್ದೇಶವಾಗಿದೆ’ ಎಂದರು.</p>.<p>‘ಮಕ್ಕಳಿಗಾಗಿ ಸರ್ಕಾರ ಹಲವಾರು ಕಾನೂನುಗಳನ್ನು ಜಾರಿಗೆ ತಂದಿದೆ. ಆದರೂ ಮಕ್ಕಳ ಮೇಲಿನ ದೌರ್ಜನ್ಯ ಇನ್ನೂ ಸಂಪೂರ್ಣವಾಗಿ ನಿಂತಿಲ್ಲ’ ಎಂದು ವಿಷಾದಿಸಿದರು.</p>.<p>ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆ ಸಂಯೋಜಕ ಮಲ್ಲಪ್ಪ ಕುಂದರಗಿ ಮಾತನಾಡಿದರು. ಶಾಲೆಯ ಮುಖ್ಯಶಿಕ್ಷಕ ವೈ.ಜಿ. ಕುಂದರಗಿ ಅಧ್ಯಕ್ಷತೆ ವಹಿಸಿದ್ದರು. ಪೊಲೀಸ್ ಅಧಿಕಾರಿ ಎಸ್.ಎಂ. ಕೋಸಂಬರಿ, ಶಿಕ್ಷಣ ಸಂಯೋಜಕ ಡಿ.ಬಿ. ನದಾಫ್, ವಿಜಯ್ ಲಕ್ಷ್ಮಿ ಗುಳ್ಳ, ಅಂಗನವಾಡಿ ಮೇಲ್ವಿಚಾರಕಿ ವಿಜಯಲಕ್ಷ್ಮಿ ಕರಿಕಟ್ಟಿ ಇದ್ದರು.</p>.<p>ಶಿಕ್ಷಕಿ ಎಸ್.ಎಸ್. ಪಟಗುಂಡಿ ಸ್ವಾಗತಿಸಿದರು. ಎ.ಎ. ಹವಾಲ್ದಾರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಮಕ್ಕಳ ಹಕ್ಕುಗಳ ಉಲ್ಲಂಘನೆ ಆಗದಂತೆ ನೋಡಿಕೊಳ್ಳುವ ಮೂಲಕ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಅವರಿಗೆ ತಲುಪಿಸಬೇಕು’ ಎಂದು ಮಕ್ಕಳ ಹಕ್ಕುಗಳ ಕಲ್ಯಾಣ ಸಮಿತಿ ಅಧ್ಯಕ್ಷೆ ಸಿಸ್ಟರ್ ಲೂರ್ಧ್ ಹೇಳಿದರು.</p>.<p>ಇಲ್ಲಿನ ಗಾಂಧಿ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆಯ ಮಕ್ಕಳ ಸಹಾಯವಾಣಿ ವತಿಯಿಂದ ಹಮ್ಮಿಕೊಂಡಿದ್ದ ‘ತೆರೆದ ಮನೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸರ್ಕಾರಿ ಶಾಲೆಯಲ್ಲಿ ಮೂಲ ಸೌಕರ್ಯಗಳ ಕೊರತೆ ಇದ್ದಲ್ಲಿ ಅವುಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸುವುದು ತೆರೆದ ಮನೆ ಕಾರ್ಯಕ್ರಮದ ಉದ್ದೇಶವಾಗಿದೆ’ ಎಂದರು.</p>.<p>‘ಮಕ್ಕಳಿಗಾಗಿ ಸರ್ಕಾರ ಹಲವಾರು ಕಾನೂನುಗಳನ್ನು ಜಾರಿಗೆ ತಂದಿದೆ. ಆದರೂ ಮಕ್ಕಳ ಮೇಲಿನ ದೌರ್ಜನ್ಯ ಇನ್ನೂ ಸಂಪೂರ್ಣವಾಗಿ ನಿಂತಿಲ್ಲ’ ಎಂದು ವಿಷಾದಿಸಿದರು.</p>.<p>ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆ ಸಂಯೋಜಕ ಮಲ್ಲಪ್ಪ ಕುಂದರಗಿ ಮಾತನಾಡಿದರು. ಶಾಲೆಯ ಮುಖ್ಯಶಿಕ್ಷಕ ವೈ.ಜಿ. ಕುಂದರಗಿ ಅಧ್ಯಕ್ಷತೆ ವಹಿಸಿದ್ದರು. ಪೊಲೀಸ್ ಅಧಿಕಾರಿ ಎಸ್.ಎಂ. ಕೋಸಂಬರಿ, ಶಿಕ್ಷಣ ಸಂಯೋಜಕ ಡಿ.ಬಿ. ನದಾಫ್, ವಿಜಯ್ ಲಕ್ಷ್ಮಿ ಗುಳ್ಳ, ಅಂಗನವಾಡಿ ಮೇಲ್ವಿಚಾರಕಿ ವಿಜಯಲಕ್ಷ್ಮಿ ಕರಿಕಟ್ಟಿ ಇದ್ದರು.</p>.<p>ಶಿಕ್ಷಕಿ ಎಸ್.ಎಸ್. ಪಟಗುಂಡಿ ಸ್ವಾಗತಿಸಿದರು. ಎ.ಎ. ಹವಾಲ್ದಾರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>