ಬೆಳಗಾವಿ: ‘ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸುವ ಕಾರ್ಯವನ್ನು ಕೂಡಲೇ ನಿಲ್ಲಿಸಬೇಕು’ ಎಂದು ಬಿಜೆಪಿ ಮುಖಂಡರ ನಿಯೋಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರನ್ನು ಆಗ್ರಹಿಸಿತು.
ದಕ್ಷಿಣ ಮತ ಕ್ಷೇತ್ರದ ಶಾಸಕ ಅಭಯ ಪಾಟೀಲ, ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ರವರು, ಬಿಜೆಪಿ ರಾಜ್ಯ ಘಟಕದ ವಕ್ತಾರ ಎಂ.ಬಿ. ಝಿರಲಿ, ಸಂಘ ಪರಿವಾರದ ಪ್ರಮುಖ ವಿನಾಯಕ ಗ್ರಾಮೋಪಾಧ್ಯಾಯ ಹಾಗೂ ಅಶೋಕ ಶಿಂತ್ರೆ ಜಿಲ್ಲಾಧಿಕಾರಿ ಜೊತೆ ಚರ್ಚಿಸಿದರು.
‘ಈ ಕುರಿತು ಸಂಬಂಧಿಸಿದ ಸಚಿವರೊಂದಿಗೂ ಚರ್ಚೆ ಮಾಡಲಾಗುವುದು’ ಎಂದು ಅಭಯ ತಿಳಿಸಿದರು.