‘ಕಪಿಲೇಶ್ವರ ದೇವಸ್ಥಾನ, ವಡಗಾವಿಯ ಎರಡು ಬನಶಂಕರಿ ದೇವಸ್ಥಾನಗಳು, ಸವದತ್ತಿ ತಾಲ್ಲೂಕು ಮುನವಳ್ಳಿಯ ಪಂಚಲಿಂಗೇಶ್ವರ ದೇವಸ್ಥಾನ, ಅಥಣಿ ತಾಲ್ಲೂಕಿನ ಕಿಳೇಗಾಂವ ಬಸವೇಶ್ವರ ದೇವಸ್ಥಾನ ಸಹಿತ 16 ದೇವಸ್ಥಾನಗಳನ್ನು ಜಿಲ್ಲಾಡಳಿತ ತನ್ನ ವಶಕ್ಕೆ ತೆಗೆದುಕೊಳ್ಳುತ್ತಿದೆ. ಇನ್ನೂ 25 ದೇವಸ್ಥಾನಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸುವ ಪ್ರಕ್ರಿಯೆ ನಡೆದಿದೆ ಎಂದು ಗೊತ್ತಾಗಿದೆ. ಈ ಕ್ರಮವು ಭಕ್ತರು ಹಾಗೂ ಜನ ವಿರೋಧಿ ಎನ್ನುವುದರಲ್ಲಿ ಯಾವುದೇ ಸಂದೇಹವಿಲ್ಲ. ರಾಜ್ಯ ಸರ್ಕಾರವ ಪೂರ್ವಾನುಮತಿಯಿಂದಲೇ ಜಿಲ್ಲಾಡಳಿತವು ಈ ಕ್ರಮ ಕೈಗೊಂಡಿರುವುದು ಸ್ಪಷ್ಟವಾಗಿದೆ. ಆದ್ದರಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಆಡಳಿತಾಧಿಕಾರಿ ನೇಮಕ ಆದೇಶ ವಾಪಸ್ ಪಡೆಯಲು ಆದೇಶಿಸಬೇಕು’ ಎಂದು ಮಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.