‘ಗ್ರಾಮದ ನೂರಾರು ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ವಿಮಾನನಿಲ್ದಾಣ ನಿರ್ಮಾಣಕ್ಕೆ ಬಳಸಲಾಗಿದೆ. ಇದರಿಂದಾಗಿ ಬಹಳ ಮಂದಿ ಜಮೀನು ಕಳೆದುಕೊಂಡಿದ್ದೇವೆ. ಸಂಕಷ್ಟಕ್ಕೂ ಸಿಲುಕಿದ್ದೇವೆ. ಈಗ ಜಾನುವಾರುಗಳ ಮೇವಿಗೆ ಮೀಸಲಿಟ್ಟ 5 ಎಕರೆ ಜಾಗವನ್ನು ತ್ಯಾಜ್ಯ ವಿಲೇವಾರಿ ಘಟಕಕ್ಕೆ ಬಳಸಲು ಪಂಚಾಯಿತಿಯಿಂಂದದ ನಿರ್ಧಾರ ಕೈಗೊಳ್ಳಲಾಗಿದೆ. ಜನರೊಂದಿಗೆ ಚರ್ಚಿಸದೆ ಏಕಪಕ್ಷೀಯವಾಗಿ ಈ ತೀರ್ಮಾನಕ್ಕೆ ಬರಲಾಗಿದೆ. ಇದು ಸರಿಯಲ್ಲ’ ಎಂದು ಹೇಳಿದರು.