ಬೆಳಗಾವಿ: ಹೊರವಲಯದ ಹಲಗಾ ಗ್ರಾಮದ ಬಳಿ ಮಲಿನ ನೀರು ಶುದ್ಧೀಕರಣ ಘಟಕ (ಎಸ್ಟಿಪಿ) ನಿರ್ಮಾಣಕ್ಕೆ ಕೃಷಿ ಜಮೀನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ರೈತರ ವಿರೋಧ ಮುಂದುವರಿದಿದ್ದು, ಪ್ರತಿಭಟನೆ ಹಿಂಪಡೆಯುವಂತೆ ಪೊಲೀಸರು ಭಾನುವಾರ ನಡೆಸಿದ ಸಂಧಾನ ಸಭೆ ವಿಫಲವಾಯಿತು. ಇನ್ನೊಂದೆಡೆ, ಸ್ಥಳದಲ್ಲಿ ಪೊಲೀಸ್ ಭದ್ರತೆಯಲ್ಲಿ ಜಮೀನು ಸಮತಟ್ಟು ಮಾಡುವ ಕೆಲಸ ನಡೆಯಿತು.