<p><strong>ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): </strong>ಕಿತ್ತೂರು ಕೋಟೆಯ ಸಮೀಪದಲ್ಲೇ ಅರಮನೆ ಪ್ರತಿರೂಪ ನಿರ್ಮಾಣ ಮಾಡಬೇಕು. ಸ್ಥಳ ಬದಲಾವಣೆ ಮಾಡಬಾರದು ಎಂದು ಆಗ್ರಹಿಸಿ ನಾಗರಿಕರು ಮಂಗಳವಾರ ಕರೆ ನೀಡಿದ್ದ ಕಿತ್ತೂರು ಬಂದ್ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.</p>.<p>ಇಲ್ಲಿನ ಸೋಮವಾರ ಪೇಟೆ, ಗುರುವಾರ ಪೇಟೆ, ಮುಖ್ಯ ನಿಲ್ದಾಣದ ಬಳಿಯ ಅಂಗಡಿ, ಮುಂಗಟ್ಟುಗಳು ಬಂದ್ ಆಗಿವೆ.<br />ಬಂದ್ ಪ್ರಯುಕ್ತ ಬೈಕ್, ಆಟೊರಿಕ್ಷಾ, ಕಾರ್, ಕ್ರೂಸರ್ ಒಳಗೊಂಡ ವಾಹನಗಳ ಮೆರವಣಿಗೆ ಕೂಡ ಆಯೋಜಿಸಲಾಗಿತ್ತು.</p>.<p>ರಾಷ್ಟ್ರೀಯ ಹೆದ್ದಾರಿ ಬಳಿಯ ವರ್ತುಲದಲ್ಲಿ ಜಮಾವಣೆ ಆದ ನಾಗರಿಕರನ್ನು ಉದ್ದೇಶಿಸಿ ಕಲ್ಮಠ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಮಾತನಾಡಿದರು. ಕಿತ್ತೂರಲ್ಲಿಯೇ ಅರಮನೆ ಪ್ರತಿರೂಪ ನಿರ್ಮಾಣಕ್ಕೆ ಆಗ್ರಹಿಸಿ ನಡೆಯುತ್ತಿರುವ ಕಿತ್ತೂರು ಬಂದ್ ನಲ್ಲಿ ನಾಗರಿಕರು ಶಾಂತ ರೀತಿಯಿಂದ ವರ್ತಿಸಬೇಕು ಎಂದು ಮನವಿ ಮಾಡಿದರು.</p>.<p>ಬಾಬಾಸಾಹೇಬ ಪಾಟೀಲ, ಹಬೀಬ ಶಿಲೇದಾರ್, ಅನಿಲ ಎಮ್ಮಿ, ಬಸವರಾಜ ಸಂಗೊಳ್ಳಿ, ಸಿದ್ದು ಮಾರಿಹಾಳ, ಎಂ. ಎಫ್. ಜಕಾತಿ ನೂರಾರು ನಾಗರಿಕರು ಇದ್ದರು. ಕಿತ್ತೂರಿಂದ ಬೆಳಗಾವಿ ಕಡೆಗೆ ಕಡೆಗೆ ವಾಹನ ಜಾಥಾ ತೆರಳಿತು.</p>.<p>ಅಲ್ಲಿ ಜಿಲ್ಲಾಧಿಕಾರಿ ಅವರಿಗೆ ಈ ಬಗ್ಗೆ ಮನವಿ ಸಲ್ಲಿಸಲಿದೆ. ವ್ಯಾಪಕ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): </strong>ಕಿತ್ತೂರು ಕೋಟೆಯ ಸಮೀಪದಲ್ಲೇ ಅರಮನೆ ಪ್ರತಿರೂಪ ನಿರ್ಮಾಣ ಮಾಡಬೇಕು. ಸ್ಥಳ ಬದಲಾವಣೆ ಮಾಡಬಾರದು ಎಂದು ಆಗ್ರಹಿಸಿ ನಾಗರಿಕರು ಮಂಗಳವಾರ ಕರೆ ನೀಡಿದ್ದ ಕಿತ್ತೂರು ಬಂದ್ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.</p>.<p>ಇಲ್ಲಿನ ಸೋಮವಾರ ಪೇಟೆ, ಗುರುವಾರ ಪೇಟೆ, ಮುಖ್ಯ ನಿಲ್ದಾಣದ ಬಳಿಯ ಅಂಗಡಿ, ಮುಂಗಟ್ಟುಗಳು ಬಂದ್ ಆಗಿವೆ.<br />ಬಂದ್ ಪ್ರಯುಕ್ತ ಬೈಕ್, ಆಟೊರಿಕ್ಷಾ, ಕಾರ್, ಕ್ರೂಸರ್ ಒಳಗೊಂಡ ವಾಹನಗಳ ಮೆರವಣಿಗೆ ಕೂಡ ಆಯೋಜಿಸಲಾಗಿತ್ತು.</p>.<p>ರಾಷ್ಟ್ರೀಯ ಹೆದ್ದಾರಿ ಬಳಿಯ ವರ್ತುಲದಲ್ಲಿ ಜಮಾವಣೆ ಆದ ನಾಗರಿಕರನ್ನು ಉದ್ದೇಶಿಸಿ ಕಲ್ಮಠ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಮಾತನಾಡಿದರು. ಕಿತ್ತೂರಲ್ಲಿಯೇ ಅರಮನೆ ಪ್ರತಿರೂಪ ನಿರ್ಮಾಣಕ್ಕೆ ಆಗ್ರಹಿಸಿ ನಡೆಯುತ್ತಿರುವ ಕಿತ್ತೂರು ಬಂದ್ ನಲ್ಲಿ ನಾಗರಿಕರು ಶಾಂತ ರೀತಿಯಿಂದ ವರ್ತಿಸಬೇಕು ಎಂದು ಮನವಿ ಮಾಡಿದರು.</p>.<p>ಬಾಬಾಸಾಹೇಬ ಪಾಟೀಲ, ಹಬೀಬ ಶಿಲೇದಾರ್, ಅನಿಲ ಎಮ್ಮಿ, ಬಸವರಾಜ ಸಂಗೊಳ್ಳಿ, ಸಿದ್ದು ಮಾರಿಹಾಳ, ಎಂ. ಎಫ್. ಜಕಾತಿ ನೂರಾರು ನಾಗರಿಕರು ಇದ್ದರು. ಕಿತ್ತೂರಿಂದ ಬೆಳಗಾವಿ ಕಡೆಗೆ ಕಡೆಗೆ ವಾಹನ ಜಾಥಾ ತೆರಳಿತು.</p>.<p>ಅಲ್ಲಿ ಜಿಲ್ಲಾಧಿಕಾರಿ ಅವರಿಗೆ ಈ ಬಗ್ಗೆ ಮನವಿ ಸಲ್ಲಿಸಲಿದೆ. ವ್ಯಾಪಕ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>