<p><strong>ಚಿಕ್ಕೋಡಿ:</strong> ಸರ್ಕಾರ ಚಿಕ್ಕೋಡಿಗೆ ಪ್ರತ್ಯೇಕವಾಗಿ ಅಪರ ಜಿಲ್ಲಾಧಿಕಾರಿ ನೇಮಿಸುವ ಬದಲಾಗಿ ಬೆಳಗಾವಿಯನ್ನು ವಿಭಜಿಸಿ ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸಿ ಜಿಲ್ಲಾಧಿಕಾರಿ ನೇಮಕ ಮಾಡುವಂತೆ ಒತ್ತಾಯಿಸಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಸದಸ್ಯರು ತಹಶೀಲ್ದಾರ್ ಚಿದಂಬರ ಕುಲಕರ್ಣಿ ಅವರಿಗೆ ಶನಿವಾರ ಮನವಿ ಸಲ್ಲಿಸಿತು.</p>.<p>ಕಳೆದ ಕೆಲವು ದಿನಗಳ ಹಿಂದೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರು ಬೆಳಗಾವಿಗೆ ಭೇಟಿ ನೀಡಿ ಸಭೆ ನಡೆಸಿ, ಚಿಕ್ಕೋಡಿಗೆ ಅಪರ ಜಿಲ್ಲಾಧಿಕಾರಿಯೊಬ್ಬರನ್ನು ನೇಮಕ ಮಾಡುವಂತೆ ಈ ಹಿಂದಿನ ಜಿಲ್ಲಾಧಕಾರಿಗಳು ನಿಯೋಗಕ್ಕೆ ಸಲಹೆ ನೀಡಿದ್ದರು. ಹೀಗಾಗಿ ನಿಯೋಗ ರಾಜ್ಯ ಸರ್ಕಾರಕ್ಕೆ ಈ ಕುರಿತು ಪ್ರಸ್ತಾವ ಸಲ್ಲಿಸಿತ್ತು. ಹೀಗಾಗಿ ಚಿಕ್ಕೋಡಿ ಉಪ ವಿಭಾಗಕ್ಕೆ ಅಪರ ಜಿಲ್ಲಾಧಿಕಾರಿ ನೇಮಕ ಮಾಡಲು ಮುಂದಾಗಿರುವ ಹಿನ್ನೆಲೆಯಲ್ಲಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಮನವಿ ಸಲ್ಲಿಸಿದೆ.</p>.<p>ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡುವುದೊಂದೇ ಪರಿಹಾರವಾಗಿದೆ. ಹೀಗಾಗಿ ಅಪರ ಜಿಲ್ಲಾಧಿಕಾರಿ ಹುದ್ದೆಯನ್ನು ಸೃಜಿಸಿದಲ್ಲಿ ಚಿಕ್ಕೋಡಿ ಜಿಲ್ಲಾ ಘೋಷಣೆ ನನೆಗುದಿಗೆ ಬೀಳುವ ಸಾಧ್ಯತೆ ಇರುವುದರಿಂದ ಸರ್ಕಾರದ ನಿರ್ಧಾರವನ್ನು ಹೋರಾಟ ಸಮಿತಿ ವಿರೋಧಿಸಿ ಮನವಿ ನೀಡಿತು.</p>.<p>ಹೋರಾಟ ಸಮಿತಿ ಅಧ್ಯಕ್ಷ ಸಂಜು ಬಡಿಗೇರ, ಚಂದ್ರಕಾಂತ ಹುಕ್ಕೇರಿ, ಸಂಜಯ ಪಾಟೀಲ, ಬಸವರಾಜ ಸಾಜನೆ, ಶ್ರೀಕಾಂತ ಅಸೋದೆ, ಅಮೋಲ ನಾವಿ, ರುದ್ರಯ್ಯಾ ಹಿರೇಮಠ, ರಣಜೀತ ಶಿಂಧೆ, ಸುಲೇಮಾನ ನಾಲಬಂದ, ಖಾನಪ್ಪ ಬಾಡಕರ, ಸಚಿನ ದೊಡಮನಿ, ರಫೀಕ ಪಠಾಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ:</strong> ಸರ್ಕಾರ ಚಿಕ್ಕೋಡಿಗೆ ಪ್ರತ್ಯೇಕವಾಗಿ ಅಪರ ಜಿಲ್ಲಾಧಿಕಾರಿ ನೇಮಿಸುವ ಬದಲಾಗಿ ಬೆಳಗಾವಿಯನ್ನು ವಿಭಜಿಸಿ ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸಿ ಜಿಲ್ಲಾಧಿಕಾರಿ ನೇಮಕ ಮಾಡುವಂತೆ ಒತ್ತಾಯಿಸಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಸದಸ್ಯರು ತಹಶೀಲ್ದಾರ್ ಚಿದಂಬರ ಕುಲಕರ್ಣಿ ಅವರಿಗೆ ಶನಿವಾರ ಮನವಿ ಸಲ್ಲಿಸಿತು.</p>.<p>ಕಳೆದ ಕೆಲವು ದಿನಗಳ ಹಿಂದೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರು ಬೆಳಗಾವಿಗೆ ಭೇಟಿ ನೀಡಿ ಸಭೆ ನಡೆಸಿ, ಚಿಕ್ಕೋಡಿಗೆ ಅಪರ ಜಿಲ್ಲಾಧಿಕಾರಿಯೊಬ್ಬರನ್ನು ನೇಮಕ ಮಾಡುವಂತೆ ಈ ಹಿಂದಿನ ಜಿಲ್ಲಾಧಕಾರಿಗಳು ನಿಯೋಗಕ್ಕೆ ಸಲಹೆ ನೀಡಿದ್ದರು. ಹೀಗಾಗಿ ನಿಯೋಗ ರಾಜ್ಯ ಸರ್ಕಾರಕ್ಕೆ ಈ ಕುರಿತು ಪ್ರಸ್ತಾವ ಸಲ್ಲಿಸಿತ್ತು. ಹೀಗಾಗಿ ಚಿಕ್ಕೋಡಿ ಉಪ ವಿಭಾಗಕ್ಕೆ ಅಪರ ಜಿಲ್ಲಾಧಿಕಾರಿ ನೇಮಕ ಮಾಡಲು ಮುಂದಾಗಿರುವ ಹಿನ್ನೆಲೆಯಲ್ಲಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಮನವಿ ಸಲ್ಲಿಸಿದೆ.</p>.<p>ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡುವುದೊಂದೇ ಪರಿಹಾರವಾಗಿದೆ. ಹೀಗಾಗಿ ಅಪರ ಜಿಲ್ಲಾಧಿಕಾರಿ ಹುದ್ದೆಯನ್ನು ಸೃಜಿಸಿದಲ್ಲಿ ಚಿಕ್ಕೋಡಿ ಜಿಲ್ಲಾ ಘೋಷಣೆ ನನೆಗುದಿಗೆ ಬೀಳುವ ಸಾಧ್ಯತೆ ಇರುವುದರಿಂದ ಸರ್ಕಾರದ ನಿರ್ಧಾರವನ್ನು ಹೋರಾಟ ಸಮಿತಿ ವಿರೋಧಿಸಿ ಮನವಿ ನೀಡಿತು.</p>.<p>ಹೋರಾಟ ಸಮಿತಿ ಅಧ್ಯಕ್ಷ ಸಂಜು ಬಡಿಗೇರ, ಚಂದ್ರಕಾಂತ ಹುಕ್ಕೇರಿ, ಸಂಜಯ ಪಾಟೀಲ, ಬಸವರಾಜ ಸಾಜನೆ, ಶ್ರೀಕಾಂತ ಅಸೋದೆ, ಅಮೋಲ ನಾವಿ, ರುದ್ರಯ್ಯಾ ಹಿರೇಮಠ, ರಣಜೀತ ಶಿಂಧೆ, ಸುಲೇಮಾನ ನಾಲಬಂದ, ಖಾನಪ್ಪ ಬಾಡಕರ, ಸಚಿನ ದೊಡಮನಿ, ರಫೀಕ ಪಠಾಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>