ಹೃದಯವನ್ನು ಇಲ್ಲಿನ ಕೆಎಲ್ಇ ಸೊಸೈಟಿಯ ಪ್ರಭಾಕರ ಕೋರೆ ಆಸ್ಪತ್ರೆಗೆ, ಲಿವರ್ ಅನ್ನು ಬೆಂಗಳೂರಿಗೆ, ಒಂದು ಕಿಡ್ನಿಯನ್ನು ಧಾರವಾಡದ ಎಸ್ಡಿಎಂಗೆ ಹಾಗೂ ಮತ್ತೊಂದು ಕಿಡ್ನಿಯನ್ನು ಹುಬ್ಬಳ್ಳಿಯ ತತ್ವಾದರ್ಶ ಆಸ್ಪತ್ರೆಗೆ ಬುಧವಾರ ಆಂಬ್ಯುಲೆನ್ಸ್ಗಳಲ್ಲಿ ಬುಧವಾರ ಕಳುಹಿಸಿಕೊಡಲಾಯಿತು. ಆ ಕುಟುಂಬದವರ ಸಮ್ಮತಿಯ ಮೇರೆಗೆ ಈ ಪ್ರಕ್ರಿಯೆಗಳು ನಡೆದಿವೆ ಎಂದು ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ.