‘ರಾಜ್ಯ ಹಾಗೂ ಜನರ ಅಭಿವೃದ್ಧಿಯನ್ನು ಕಡೆಗಣಿಸಿ, ಜನಪ್ರತಿನಿಧಿಗಳು ರೆಸಾರ್ಟ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳ ವಿರುದ್ಧ ಘೋಷಣೆ ಕೂಗಿದರು. ಮೂರೂ ಪಕ್ಷಗಳ ಮುಖಂಡರ ಭಾವಚಿತ್ರಕ್ಕೆ ಸಗಣಿ ಹಾಗೂ ಮೊಟ್ಟೆ ಎಸೆದು, ಪೊರಕೆಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು.