<p><strong>ನಿಪ್ಪಾಣಿ</strong>: ಮಳೆ ಅಬ್ಬರ ತಾಲೂಕಿನಾದ್ಯಂತ ಮುಂದುವರೆದಿದ್ದು ನದಿಗಳು ಉಕ್ಕಿ ಹರಿಯುತ್ತಿವೆ. ಲೋಕೋಪಯೋಗಿ ಇಲಾಖೆಯಲ್ಲಿ 30 ಮಿ.ಮೀ., ಕೃಷಿ ಸಂಶೋಧನಾ ಕೇಂದ್ರದಲ್ಲಿ 30.6 ಮೀ.ಮೀ, ತಾಲ್ಲೂಕಿನ ಸೌಂದಲಗಾ ಗ್ರಾಮದಲ್ಲಿ 24 ಮಿ.ಮೀ. ಮತ್ತು ಗಳತಗಾ ಗ್ರಾಮದಲ್ಲಿ 17.2 ಮಿ.ಮೀ. ಮಳೆಯಾಗಿದೆ.</p>.<p>ತಾಲ್ಲೂಕಿನಲ್ಲಿ ವೇದಗಂಗಾ ಹಾಗೂ ದೂಧಗಂಗಾ ನದಿಗಳಿಗೆ ನಿರ್ಮಿಸಿದ ಭೋಜವಾಡಿ-ಕುನ್ನೂರ, ಭೋಜ-ಕಾರದಗಾ, ಅಕ್ಕೋಳ-ಸಿದ್ನಾಳ, ಜತ್ರಾಟ ಭಿವಶಿ, ಹುನ್ನರಗಿ-ಮಮದಾಪೂರ, ಕುನ್ನೂರ-ಬಾರವಾಡ, ಸೇತುವೆಗಳು ಇನ್ನೂ ಜಲಾವೃತಗೊಂಡಿವೆ.</p>.<p>‘ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಮತ್ತು ನದಿಗಳಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾದ ಪರಿಣಾಮ ತಾಲ್ಲೂಕಿನ ವಿವಿಧೆಡೆ ಕಬ್ಬು ಮೊದಲಾದ ಬೆಳೆಗಳು ಜಲಾವೃತವಾಗಿವೆ. ಇನ್ನೂ ಎರಡು-ಮೂರು ದಿನ ಮಳೆ ಹೀಗೆಯೇ ಮುಂದುವರೆದಲ್ಲಿ ಪ್ರವಾಹ ಸಾಧ್ಯತೆಗಳಿದ್ದು ಎಲ್ಲ ಸಕಲ ವ್ಯವಸ್ಥೆ ಹಮ್ಮಿಕೊಳ್ಳಲಾಗಿದೆ’ ಎಂದು ತಹಶೀಲ್ದಾರ್ ವಿಜಯ ಕಡಕೋಳ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಿಪ್ಪಾಣಿ</strong>: ಮಳೆ ಅಬ್ಬರ ತಾಲೂಕಿನಾದ್ಯಂತ ಮುಂದುವರೆದಿದ್ದು ನದಿಗಳು ಉಕ್ಕಿ ಹರಿಯುತ್ತಿವೆ. ಲೋಕೋಪಯೋಗಿ ಇಲಾಖೆಯಲ್ಲಿ 30 ಮಿ.ಮೀ., ಕೃಷಿ ಸಂಶೋಧನಾ ಕೇಂದ್ರದಲ್ಲಿ 30.6 ಮೀ.ಮೀ, ತಾಲ್ಲೂಕಿನ ಸೌಂದಲಗಾ ಗ್ರಾಮದಲ್ಲಿ 24 ಮಿ.ಮೀ. ಮತ್ತು ಗಳತಗಾ ಗ್ರಾಮದಲ್ಲಿ 17.2 ಮಿ.ಮೀ. ಮಳೆಯಾಗಿದೆ.</p>.<p>ತಾಲ್ಲೂಕಿನಲ್ಲಿ ವೇದಗಂಗಾ ಹಾಗೂ ದೂಧಗಂಗಾ ನದಿಗಳಿಗೆ ನಿರ್ಮಿಸಿದ ಭೋಜವಾಡಿ-ಕುನ್ನೂರ, ಭೋಜ-ಕಾರದಗಾ, ಅಕ್ಕೋಳ-ಸಿದ್ನಾಳ, ಜತ್ರಾಟ ಭಿವಶಿ, ಹುನ್ನರಗಿ-ಮಮದಾಪೂರ, ಕುನ್ನೂರ-ಬಾರವಾಡ, ಸೇತುವೆಗಳು ಇನ್ನೂ ಜಲಾವೃತಗೊಂಡಿವೆ.</p>.<p>‘ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಮತ್ತು ನದಿಗಳಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾದ ಪರಿಣಾಮ ತಾಲ್ಲೂಕಿನ ವಿವಿಧೆಡೆ ಕಬ್ಬು ಮೊದಲಾದ ಬೆಳೆಗಳು ಜಲಾವೃತವಾಗಿವೆ. ಇನ್ನೂ ಎರಡು-ಮೂರು ದಿನ ಮಳೆ ಹೀಗೆಯೇ ಮುಂದುವರೆದಲ್ಲಿ ಪ್ರವಾಹ ಸಾಧ್ಯತೆಗಳಿದ್ದು ಎಲ್ಲ ಸಕಲ ವ್ಯವಸ್ಥೆ ಹಮ್ಮಿಕೊಳ್ಳಲಾಗಿದೆ’ ಎಂದು ತಹಶೀಲ್ದಾರ್ ವಿಜಯ ಕಡಕೋಳ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>