<p><strong>ಬೆಳಗಾವಿ</strong>: ‘ಸ್ವಾರ್ಥ ಹಿತಾಸಕ್ತಿಗಳನ್ನು ಮರೆತು ನಿಷ್ಕಾಮ ಭಾವನೆಯಿಂದ ಸೇವೆ ನಿರ್ವಹಿಸಿದಾಗ ಮಾತ್ರ ಆರೋಗ್ಯಯುತ ಸಮಾಜ ನಿರ್ಮಿಸಲು ಸಾಧ್ಯವಿದೆ’ ಎಂದು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು.</p>.<p>ನಗರದ ಕೆಎಲ್ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆ ಮತ್ತು ರೋಟರಿ ಕ್ಲಬ್ ಬೆಳಗಾವಿ ಸಹಯೋಗದಲ್ಲಿ ಆರಂಭಿಸಿರುವ ‘ರೋಟರಿ ಕೆಎಲ್ಇ ಆಮ್ಲಜನಕ ಬ್ಯಾಂಕ್’ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಜನಕಲ್ಯಾಣಕ್ಕಾಗಿ ಕೆಎಲ್ಇ ಹಾಗೂ ರೋಟರಿ ಸಂಸ್ಥೆಗಳು ಎಂದಿಗೂ ಮುಂದಿವೆ. ಪ್ರಸ್ತುತ ಆಮ್ಲಜನಕ ಕೊರತೆಯಿಂದ ಸಾವು–ನೋವುಗಳ ವರದಿಯನ್ನು ನೋಡುತ್ತಿದ್ದೇವೆ. ಇದನ್ನು ಮನಗಂಡು ಕೋವಿಡ್ ಪೀಡಿತರ ನೋವು ನಿವಾರಿಸುವ ಕೆಲಸ ಮಾಡುತ್ತಿದ್ದೇವೆ. ಇದು ನಿಜಕ್ಕೂ ಹೆಮ್ಮೆ ಎನಿಸುತ್ತದೆ’ ಎಂದರು.</p>.<p>ರೋಟರಿ ಕ್ಲಬ್ನ ಶರದ್ ಪೈ ಮಾತನಾಡಿ, ‘ನಾಗರಿಕರಲ್ಲಿ ಮನೆ ಮಾಡಿರುವ ಭೀತಿ ಹೋಗಲಾಡಿಸಲು ಇನ್ನೂ ಹೆಚ್ಚಿನ ಆಮ್ಲಜನಕ ಕಾನ್ಸನ್ಟ್ರೇಟರ್ಗಳನ್ನು ನೀಡಲಾಗುವುದು’ ಎಂದು ತಿಳಿಸಿದರು.</p>.<p>ಕೆಎಲ್ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆ ನಿರ್ದೇಶಕ ಡಾ.ಎಸ್.ಸಿ. ಧಾರವಾಡ, ‘ರೋಟರಿ ಕೆಎಲ್ಇ ಆಮ್ಲಜನಕ ಬ್ಯಾಂಕ್ ಜನಸ್ನೇಹಿಯಾಗಿದೆ. ಅವಶ್ಯವಿರುವ ರೋಗಿಗಳು ಈ ಸೇವೆ ಪಡೆಯಬಹುದು. ಅತ್ಯಲ್ಪ ಮುಂಗಡ ಹಣ ಪಾವತಿಸಬೇಕು. ಹೆಚ್ಚಿನ ಮಾಹಿತಿಗೆ ಮೊ:8660369283, 9071413829, 8550887777 ಸಂಪರ್ಕಿಸಬಹುದು’ ಎಂದರು.</p>.<p>ಯುಎಸ್ಎಂ–ಕೆಎಲ್ಇ ನಿರ್ದೇಶಕ ಡಾ.ಎಚ್.ಬಿ. ರಾಜಶೇಖರ, ಕೆಎಲ್ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆಯ ಹಿರಿಯ ವೈದ್ಯರಾದ ಡಾ.ಬಿ.ಎಸ್. ಮಹಾಂತಶೆಟ್ಟಿ, ಡಾ.ಆರ್.ಜಿ. ನೆಲವಿಗಿ, ಡಾ.ಆರ್.ಆರ್. ವಾಳ್ವೇಕರ, ಡಾ.ಶ್ರೀಕಾಂತ ಮೇತ್ರಿ, ರೋಟರಿ ಕ್ಲಬ್ ಖಜಾಂಚಿ ಗಣೇಶ ದೇಶಪಾಂಡೆ, ಸಾಗರ ಕಲಘಟಗಿ ಇದ್ದರು.</p>.<p>ರೊಟರಿ ಕ್ಲಬ್ ಅಧ್ಯಕ್ಷ ಡಾ.ಕೆ.ಎಂ. ಕೆಲೂಸ್ಕರ ಸ್ವಾಗತಿಸಿದರು. ಸಂತೋಷ ಇತಾಪೆ ನಿರೂಪಿಸಿದರು. ಕೆಎಲ್ಇ ಹೋಮಿಯೋಪತಿ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎ. ಉಡಚನಕರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಸ್ವಾರ್ಥ ಹಿತಾಸಕ್ತಿಗಳನ್ನು ಮರೆತು ನಿಷ್ಕಾಮ ಭಾವನೆಯಿಂದ ಸೇವೆ ನಿರ್ವಹಿಸಿದಾಗ ಮಾತ್ರ ಆರೋಗ್ಯಯುತ ಸಮಾಜ ನಿರ್ಮಿಸಲು ಸಾಧ್ಯವಿದೆ’ ಎಂದು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು.</p>.<p>ನಗರದ ಕೆಎಲ್ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆ ಮತ್ತು ರೋಟರಿ ಕ್ಲಬ್ ಬೆಳಗಾವಿ ಸಹಯೋಗದಲ್ಲಿ ಆರಂಭಿಸಿರುವ ‘ರೋಟರಿ ಕೆಎಲ್ಇ ಆಮ್ಲಜನಕ ಬ್ಯಾಂಕ್’ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಜನಕಲ್ಯಾಣಕ್ಕಾಗಿ ಕೆಎಲ್ಇ ಹಾಗೂ ರೋಟರಿ ಸಂಸ್ಥೆಗಳು ಎಂದಿಗೂ ಮುಂದಿವೆ. ಪ್ರಸ್ತುತ ಆಮ್ಲಜನಕ ಕೊರತೆಯಿಂದ ಸಾವು–ನೋವುಗಳ ವರದಿಯನ್ನು ನೋಡುತ್ತಿದ್ದೇವೆ. ಇದನ್ನು ಮನಗಂಡು ಕೋವಿಡ್ ಪೀಡಿತರ ನೋವು ನಿವಾರಿಸುವ ಕೆಲಸ ಮಾಡುತ್ತಿದ್ದೇವೆ. ಇದು ನಿಜಕ್ಕೂ ಹೆಮ್ಮೆ ಎನಿಸುತ್ತದೆ’ ಎಂದರು.</p>.<p>ರೋಟರಿ ಕ್ಲಬ್ನ ಶರದ್ ಪೈ ಮಾತನಾಡಿ, ‘ನಾಗರಿಕರಲ್ಲಿ ಮನೆ ಮಾಡಿರುವ ಭೀತಿ ಹೋಗಲಾಡಿಸಲು ಇನ್ನೂ ಹೆಚ್ಚಿನ ಆಮ್ಲಜನಕ ಕಾನ್ಸನ್ಟ್ರೇಟರ್ಗಳನ್ನು ನೀಡಲಾಗುವುದು’ ಎಂದು ತಿಳಿಸಿದರು.</p>.<p>ಕೆಎಲ್ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆ ನಿರ್ದೇಶಕ ಡಾ.ಎಸ್.ಸಿ. ಧಾರವಾಡ, ‘ರೋಟರಿ ಕೆಎಲ್ಇ ಆಮ್ಲಜನಕ ಬ್ಯಾಂಕ್ ಜನಸ್ನೇಹಿಯಾಗಿದೆ. ಅವಶ್ಯವಿರುವ ರೋಗಿಗಳು ಈ ಸೇವೆ ಪಡೆಯಬಹುದು. ಅತ್ಯಲ್ಪ ಮುಂಗಡ ಹಣ ಪಾವತಿಸಬೇಕು. ಹೆಚ್ಚಿನ ಮಾಹಿತಿಗೆ ಮೊ:8660369283, 9071413829, 8550887777 ಸಂಪರ್ಕಿಸಬಹುದು’ ಎಂದರು.</p>.<p>ಯುಎಸ್ಎಂ–ಕೆಎಲ್ಇ ನಿರ್ದೇಶಕ ಡಾ.ಎಚ್.ಬಿ. ರಾಜಶೇಖರ, ಕೆಎಲ್ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆಯ ಹಿರಿಯ ವೈದ್ಯರಾದ ಡಾ.ಬಿ.ಎಸ್. ಮಹಾಂತಶೆಟ್ಟಿ, ಡಾ.ಆರ್.ಜಿ. ನೆಲವಿಗಿ, ಡಾ.ಆರ್.ಆರ್. ವಾಳ್ವೇಕರ, ಡಾ.ಶ್ರೀಕಾಂತ ಮೇತ್ರಿ, ರೋಟರಿ ಕ್ಲಬ್ ಖಜಾಂಚಿ ಗಣೇಶ ದೇಶಪಾಂಡೆ, ಸಾಗರ ಕಲಘಟಗಿ ಇದ್ದರು.</p>.<p>ರೊಟರಿ ಕ್ಲಬ್ ಅಧ್ಯಕ್ಷ ಡಾ.ಕೆ.ಎಂ. ಕೆಲೂಸ್ಕರ ಸ್ವಾಗತಿಸಿದರು. ಸಂತೋಷ ಇತಾಪೆ ನಿರೂಪಿಸಿದರು. ಕೆಎಲ್ಇ ಹೋಮಿಯೋಪತಿ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎ. ಉಡಚನಕರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>