‘ನಿತ್ಯ ರಾತ್ರಿ 8ಕ್ಕೆ ಬೆಳಗಾವಿಯಿಂದ ಹೊರಡುವ ಬಸ್ ಲೋಕಾಪುರ, ಮುಧೋಳ, ಜಮಖಂಡಿ, ವಿಜಯಪುರ, ಸೊಲ್ಲಾಪುರ, ತುಳಜಾಪುರ ಮಾರ್ಗವಾಗಿ ಸಂಚರಿಸಿ, ಮಾರನೇ ದಿನ ಬೆಳಿಗ್ಗೆ 6.20ಕ್ಕೆ ಲಾತೂರ ತಲುಪಲಿದೆ. ಅಲ್ಲಿಂದ ಸಂಜೆ 7.30ಕ್ಕೆ ಹೊರಟು, ಬೆಳಿಗ್ಗೆ 5.30ಕ್ಕೆ ಬೆಳಗಾವಿ ತಲುಪಲಿದೆ. ಬಸ್ನಲ್ಲಿ ಪ್ರಯಾಣಿಸುವ ಪ್ರತಿ ಪ್ರಯಾಣಿಕರಿಗೆ ₹10 ಲಕ್ಷ ಅಪಘಾತ ಪರಿಹಾರ ಸೌಲಭ್ಯವಿದೆ’ ಎಂದರು. ಸಾರಿಗೆ ಸಂಸ್ಥೆಯ ವಿಭಾಗೀಯ ಸಂಚಾರ ಅಧಿಕಾರಿ ಕೆ.ಕೆ.ಲಮಾಣಿ ಇದ್ದರು.