<p><strong>ಮುನವಳ್ಳಿ</strong>: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಜನರ ಬದುಕಿನಲ್ಲಿ ಹಲವಾರು ಬದಲಾವಣೆ ತಂದಿವೆ ಎಂದು ಬೈಲಹೊಂಗಲ ಮತ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮತ್ತು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಸದಸ್ಯ ವಿಷ್ಣು ಕಾರಭಾರಿ ಹೇಳಿದರು.</p>.<p>ಮಂಗಳವಾರ ಯಕ್ಕುಂಡಿ ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ಜರುಗಿದ ಸವದತ್ತಿ ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಜಾಗೃತಿ ಮತ್ತು ಕಾರ್ಯಾಗಾರದಲ್ಲಿ ಮಾತನಾಡಿದರು.</p>.<p>ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹ ಜ್ಯೋತಿ, ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಲಕ್ಷ್ಮೀ, ಹಾಗೂ ಯುವನಿಧಿ ಯೋಜನೆಗಳು ಜನಸಾಮಾನ್ಯರಿಗೆ ಆರ್ಥಿಕ ಭದ್ರತೆ, ಆತ್ಮವಿಶ್ವಾಸ ಮೂಡಿಸುವುದರ ಜೊತೆಗೆ ಮಹಿಳೆಯರಿಗೆ ಆರ್ಥಿಕ ಒತ್ತಡ ಕಡಿಮೆ ಮಾಡಿದೆ. ಈ ಯೋಜನೆಗಳಿಂದ ವಂಚಿತರಾಗಿದ್ದರೆ ಅಂತವರು ಸಂಬಂಧಿಸಿದ ದಾಖಲೆ ಸಲ್ಲಿಸಿದರೆ ಅವರ ಸಮಸ್ಯೆಗೆ ಸ್ಪಂದಿಸುವುದಾಗಿ ತಿಳಿಸಿದರು.</p>.<p>ತಾಲ್ಲೂಕು ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷರಾದ ಶಿವಕುಮಾರ ರಾಠೋಡ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, ಈ ಎಲ್ಲ ಯೋಜನೆಗಳು ಮಹಿಳೆಯರ ಸಬಲೀಕರಣಕ್ಕೆ ತಂದ ಯೋಜನೆಗಳಾಗಿದ್ದು ಎಲ್ಲರೂ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.</p>.<p>ಪಿಡಿಒ ವೈ.ಪಿ ಬೋಳಶೆಟ್ಟಿ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಚೇತನಾ ಹಳ್ಳಿ ಮಾತನಾಡಿದರು.</p>.<p>ಗ್ರಾ.ಪಂ.ಸದಸ್ಯ ಹಸನಸಾಬ ಬಾರಿಗಿಡದ, ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಸೈನಾಜ ಮುಜಾವರ, ಕಾರ್ಯದರ್ಶಿ ಸುಶೀಲಾ ವಿರೇಶನವರ, ರವಿ ತಿಮ್ಮೇಶಿ, ಬಸವರಾಜ ಹೂಗಾರ ಉಪಸ್ಥಿತರಿದ್ದರು. ಪ್ರಕಾಶ ಕಮ್ಮಾರ ನಿರೂಪಿಸಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುನವಳ್ಳಿ</strong>: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಜನರ ಬದುಕಿನಲ್ಲಿ ಹಲವಾರು ಬದಲಾವಣೆ ತಂದಿವೆ ಎಂದು ಬೈಲಹೊಂಗಲ ಮತ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮತ್ತು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಸದಸ್ಯ ವಿಷ್ಣು ಕಾರಭಾರಿ ಹೇಳಿದರು.</p>.<p>ಮಂಗಳವಾರ ಯಕ್ಕುಂಡಿ ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ಜರುಗಿದ ಸವದತ್ತಿ ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಜಾಗೃತಿ ಮತ್ತು ಕಾರ್ಯಾಗಾರದಲ್ಲಿ ಮಾತನಾಡಿದರು.</p>.<p>ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹ ಜ್ಯೋತಿ, ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಲಕ್ಷ್ಮೀ, ಹಾಗೂ ಯುವನಿಧಿ ಯೋಜನೆಗಳು ಜನಸಾಮಾನ್ಯರಿಗೆ ಆರ್ಥಿಕ ಭದ್ರತೆ, ಆತ್ಮವಿಶ್ವಾಸ ಮೂಡಿಸುವುದರ ಜೊತೆಗೆ ಮಹಿಳೆಯರಿಗೆ ಆರ್ಥಿಕ ಒತ್ತಡ ಕಡಿಮೆ ಮಾಡಿದೆ. ಈ ಯೋಜನೆಗಳಿಂದ ವಂಚಿತರಾಗಿದ್ದರೆ ಅಂತವರು ಸಂಬಂಧಿಸಿದ ದಾಖಲೆ ಸಲ್ಲಿಸಿದರೆ ಅವರ ಸಮಸ್ಯೆಗೆ ಸ್ಪಂದಿಸುವುದಾಗಿ ತಿಳಿಸಿದರು.</p>.<p>ತಾಲ್ಲೂಕು ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷರಾದ ಶಿವಕುಮಾರ ರಾಠೋಡ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, ಈ ಎಲ್ಲ ಯೋಜನೆಗಳು ಮಹಿಳೆಯರ ಸಬಲೀಕರಣಕ್ಕೆ ತಂದ ಯೋಜನೆಗಳಾಗಿದ್ದು ಎಲ್ಲರೂ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.</p>.<p>ಪಿಡಿಒ ವೈ.ಪಿ ಬೋಳಶೆಟ್ಟಿ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಚೇತನಾ ಹಳ್ಳಿ ಮಾತನಾಡಿದರು.</p>.<p>ಗ್ರಾ.ಪಂ.ಸದಸ್ಯ ಹಸನಸಾಬ ಬಾರಿಗಿಡದ, ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಸೈನಾಜ ಮುಜಾವರ, ಕಾರ್ಯದರ್ಶಿ ಸುಶೀಲಾ ವಿರೇಶನವರ, ರವಿ ತಿಮ್ಮೇಶಿ, ಬಸವರಾಜ ಹೂಗಾರ ಉಪಸ್ಥಿತರಿದ್ದರು. ಪ್ರಕಾಶ ಕಮ್ಮಾರ ನಿರೂಪಿಸಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>