<p><strong>ಮೂಡಲಗಿ:</strong> ‘ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ದೊರಕಿಸಿಕೊಡುವ ಹೋರಾಟ ನಿಲ್ಲದು, ಪ್ರಾಣ ಇರುವವರೆಗೆ ಹೋರಾಟ ಇರುವುದು’ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.</p>.<p>ಶುಕ್ರವಾರ ಮೂಡಲಗಿಯಲ್ಲಿ ಸೌಹಾರ್ದ ಸಹಕಾರಿ ಸಂಘದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಇತ್ತಿಚಿನ ಬೆಳವಣಿಗೆಯಿಂದ ನಮ್ಮ ಹೋರಾಟಕ್ಕೆ ಇನ್ನಷ್ಟು ಶಕ್ತಿಯನ್ನು ತಂದುಕೊಟ್ಟಿದೆ. ಸಮಾಜದ ಜನರು ಅಹಿತಕರವಾದ ವದಂತಿಗಳಿಗೆ ಕಿವಿಗೊಡಬಾರದು ಎಂದರು.</p>.<p>ಸಂಘಟನೆ, ಹೋರಾಟಗಳ ಸಂದರ್ಭದಲ್ಲಿ ಭಿನ್ನಾಭಿಪ್ರಾಯಗಳು ಬರುವುದು ಸಹಜವಾಗಿದೆ. ಮುಂದಿನ ದಿನಗಳಲ್ಲಿ ಅಂಥ ಭಿನ್ನಾಭಿಪ್ರಾಯಗಳನ್ನು ಸಮಾಜದ ಜನರ ಸಹಕಾರದೊಂದಿಗೆ ಸರಿದೂಗಿಸಿಕೊಂಡು ಸಂಘಟನೆಯನ್ನು ಇನ್ನಷ್ಟು ಗಟ್ಟಿಗೊಳಿಸಲಾಗುವುದು. ಪಂಚಮಸಾಲಿ ಸಮಾಜದ ಜನರು ಯಾವುದೇ ರೀತಿಯಲ್ಲಿ ವಿಚಲಿತರಾಗಬಾರದು ಎಂದರು.</p>.<p>ಪಂಚಮಸಾಲಿ ಸಮಾಜದ ಸಂಘಟನೆ ಬೆಳಗಾವಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಗಪ್ಪ ಪಿರೋಜಿ, ಪಂಚಮಸಾಲಿ ಯುವ ಘಟಕದ ಅಧ್ಯಕ್ಷ ಸಂಗಮೇಶ ಕೌಜಲಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಲಗಿ:</strong> ‘ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ದೊರಕಿಸಿಕೊಡುವ ಹೋರಾಟ ನಿಲ್ಲದು, ಪ್ರಾಣ ಇರುವವರೆಗೆ ಹೋರಾಟ ಇರುವುದು’ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.</p>.<p>ಶುಕ್ರವಾರ ಮೂಡಲಗಿಯಲ್ಲಿ ಸೌಹಾರ್ದ ಸಹಕಾರಿ ಸಂಘದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಇತ್ತಿಚಿನ ಬೆಳವಣಿಗೆಯಿಂದ ನಮ್ಮ ಹೋರಾಟಕ್ಕೆ ಇನ್ನಷ್ಟು ಶಕ್ತಿಯನ್ನು ತಂದುಕೊಟ್ಟಿದೆ. ಸಮಾಜದ ಜನರು ಅಹಿತಕರವಾದ ವದಂತಿಗಳಿಗೆ ಕಿವಿಗೊಡಬಾರದು ಎಂದರು.</p>.<p>ಸಂಘಟನೆ, ಹೋರಾಟಗಳ ಸಂದರ್ಭದಲ್ಲಿ ಭಿನ್ನಾಭಿಪ್ರಾಯಗಳು ಬರುವುದು ಸಹಜವಾಗಿದೆ. ಮುಂದಿನ ದಿನಗಳಲ್ಲಿ ಅಂಥ ಭಿನ್ನಾಭಿಪ್ರಾಯಗಳನ್ನು ಸಮಾಜದ ಜನರ ಸಹಕಾರದೊಂದಿಗೆ ಸರಿದೂಗಿಸಿಕೊಂಡು ಸಂಘಟನೆಯನ್ನು ಇನ್ನಷ್ಟು ಗಟ್ಟಿಗೊಳಿಸಲಾಗುವುದು. ಪಂಚಮಸಾಲಿ ಸಮಾಜದ ಜನರು ಯಾವುದೇ ರೀತಿಯಲ್ಲಿ ವಿಚಲಿತರಾಗಬಾರದು ಎಂದರು.</p>.<p>ಪಂಚಮಸಾಲಿ ಸಮಾಜದ ಸಂಘಟನೆ ಬೆಳಗಾವಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಗಪ್ಪ ಪಿರೋಜಿ, ಪಂಚಮಸಾಲಿ ಯುವ ಘಟಕದ ಅಧ್ಯಕ್ಷ ಸಂಗಮೇಶ ಕೌಜಲಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>