<p>ಅಥಣಿ: ತಾಲ್ಲೂಕಿನ ಕೋಹಳ್ಳಿ ಗ್ರಾಮದ ಕೆರೆ ರಸ್ತೆಯ ತೋಟದಲ್ಲಿ ಶನಿವಾರ ಸಂಜೆ ಹುಲಿಮರಿ ಹಾಗೂ ಕಾಡುಕೋಣ ಕಾಣಿಸಿಕೊಂಡಿದೆ ಎಂಬ ವದಂತಿ ಹರಿದಾಡಿದ್ದರಿಂದಾಗಿ ಅಲ್ಲಿನ ನಿವಾಸಿಗಳು ಆತಂಕಕ್ಕೆ ಒಳಗಾಗಿದ್ದಾರೆ.</p>.<p>ಗ್ರಾಮದ ಡಂಬಳಿಯವರ ತೋಟದಲ್ಲಿ ಹುಲಿ ಮರಿಯನ್ನು ಹೋಲುವಂತಹ ಪ್ರಾಣಿ ಕಾಣಿಸಿಕೊಂಡಿವೆ ಎನ್ನಲಾಗಿದೆ. ವಿಡಿಯೊ ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದರಿಂದಾಗಿ ಜನರು ಆತಂಕದಲ್ಲೇ ರಾತ್ರಿ ಕಳೆದಿದ್ದಾರೆ.</p>.<p>ವಿಷಯ ತಿಳಿದ ವಲಯ ಅರಣ್ಯ ಅಧಿಕಾರಿ ಪ್ರಶಾಂತ ಗಾಣಿಗೇರ ನೇತೃತ್ವದ ತಂಡ ಬಂದು ಸ್ಥಳ ಪರಿಶೀಲನೆ ನಡೆಸಿತು.</p>.<p>‘ಇಲ್ಲಿ ಸಂಚರಿಸಿರುವುದು ಹುಲಿ ಮರಿ ಅಲ್ಲ; ಅದು ಕಾಡು ಬೆಕ್ಕು. ಹೆಜ್ಜೆ ಗುರುತುಗಳನ್ನು ಪರಿಶೀಲಿಸಿದಾಗ ಇದು ಸ್ಪಷ್ಟವಾಗಿದೆ. ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ’ ಎಂದು ಪ್ರಶಾಂತ ಹೇಳಿದರು.</p>.<p>‘ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೊದಲ್ಲಿರುವ ಪ್ರಾಣಿಯೂ ಕಾಡು ಬೆಕ್ಕು ರೀತಿಯೇ ಕಾಣಿಸುತ್ತಿದೆ. ಹೆಜ್ಜೆ ಗುರುತು ಸಹ ಹುಲಿ ಮರಿಯದ್ದಲ್ಲ. ಇಲ್ಲಿಗೆ ಹುಲಿ ಬರಲು ಸಾಧ್ಯವೇ ಇಲ್ಲ. ಜನರು ವದಂತಿಗಳಿಗೆ ಕಿವಿಕೊಡಬಾರದು’ ಎಂದರು.</p>.<p>‘ಮತ್ತೊಂದು ಸ್ಥಳದಲ್ಲಿ ಕಾಣಿಸಿಕೊಂಡ ಕಾಡುಕೋಣವನ್ನು ಪತ್ತೆ ಹಚ್ಚಿ, ಊರಿಂದ ಹೊರಗಡೆಗೆ ಓಡಿಸಲಾಗುವುದು’ ಎಂದು ತಿಳಿಸಿದರು.</p>.<p>ಅರಣ್ಯ ಅಧಿಕಾರಿಗಳಾದ ಮಂಜುನಾಥ ಪಾಟೀಲ, ಸುರೇಶ ಬಾಗಿ, ಮಹಾಂತೇಶ ಚೌಗಲಾ, ಇಸ್ಮಾಯಿಲ್ ಪಠಾಣ, ಶಂಕರಯ್ಯ ಪೂಜಾರಿ, ನಾಗಪ್ಪ ಆಚಕಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಥಣಿ: ತಾಲ್ಲೂಕಿನ ಕೋಹಳ್ಳಿ ಗ್ರಾಮದ ಕೆರೆ ರಸ್ತೆಯ ತೋಟದಲ್ಲಿ ಶನಿವಾರ ಸಂಜೆ ಹುಲಿಮರಿ ಹಾಗೂ ಕಾಡುಕೋಣ ಕಾಣಿಸಿಕೊಂಡಿದೆ ಎಂಬ ವದಂತಿ ಹರಿದಾಡಿದ್ದರಿಂದಾಗಿ ಅಲ್ಲಿನ ನಿವಾಸಿಗಳು ಆತಂಕಕ್ಕೆ ಒಳಗಾಗಿದ್ದಾರೆ.</p>.<p>ಗ್ರಾಮದ ಡಂಬಳಿಯವರ ತೋಟದಲ್ಲಿ ಹುಲಿ ಮರಿಯನ್ನು ಹೋಲುವಂತಹ ಪ್ರಾಣಿ ಕಾಣಿಸಿಕೊಂಡಿವೆ ಎನ್ನಲಾಗಿದೆ. ವಿಡಿಯೊ ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದರಿಂದಾಗಿ ಜನರು ಆತಂಕದಲ್ಲೇ ರಾತ್ರಿ ಕಳೆದಿದ್ದಾರೆ.</p>.<p>ವಿಷಯ ತಿಳಿದ ವಲಯ ಅರಣ್ಯ ಅಧಿಕಾರಿ ಪ್ರಶಾಂತ ಗಾಣಿಗೇರ ನೇತೃತ್ವದ ತಂಡ ಬಂದು ಸ್ಥಳ ಪರಿಶೀಲನೆ ನಡೆಸಿತು.</p>.<p>‘ಇಲ್ಲಿ ಸಂಚರಿಸಿರುವುದು ಹುಲಿ ಮರಿ ಅಲ್ಲ; ಅದು ಕಾಡು ಬೆಕ್ಕು. ಹೆಜ್ಜೆ ಗುರುತುಗಳನ್ನು ಪರಿಶೀಲಿಸಿದಾಗ ಇದು ಸ್ಪಷ್ಟವಾಗಿದೆ. ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ’ ಎಂದು ಪ್ರಶಾಂತ ಹೇಳಿದರು.</p>.<p>‘ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೊದಲ್ಲಿರುವ ಪ್ರಾಣಿಯೂ ಕಾಡು ಬೆಕ್ಕು ರೀತಿಯೇ ಕಾಣಿಸುತ್ತಿದೆ. ಹೆಜ್ಜೆ ಗುರುತು ಸಹ ಹುಲಿ ಮರಿಯದ್ದಲ್ಲ. ಇಲ್ಲಿಗೆ ಹುಲಿ ಬರಲು ಸಾಧ್ಯವೇ ಇಲ್ಲ. ಜನರು ವದಂತಿಗಳಿಗೆ ಕಿವಿಕೊಡಬಾರದು’ ಎಂದರು.</p>.<p>‘ಮತ್ತೊಂದು ಸ್ಥಳದಲ್ಲಿ ಕಾಣಿಸಿಕೊಂಡ ಕಾಡುಕೋಣವನ್ನು ಪತ್ತೆ ಹಚ್ಚಿ, ಊರಿಂದ ಹೊರಗಡೆಗೆ ಓಡಿಸಲಾಗುವುದು’ ಎಂದು ತಿಳಿಸಿದರು.</p>.<p>ಅರಣ್ಯ ಅಧಿಕಾರಿಗಳಾದ ಮಂಜುನಾಥ ಪಾಟೀಲ, ಸುರೇಶ ಬಾಗಿ, ಮಹಾಂತೇಶ ಚೌಗಲಾ, ಇಸ್ಮಾಯಿಲ್ ಪಠಾಣ, ಶಂಕರಯ್ಯ ಪೂಜಾರಿ, ನಾಗಪ್ಪ ಆಚಕಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>