ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಪಡಿತರ ವ್ಯವಸ್ಥೆಯಲ್ಲಿ ಏಪ್ರಿಲ್ನಿಂದ ಸಮಗ್ರ ಬದಲಾವಣೆ ತರುತ್ತೇವೆ. ಮಾರ್ಚ್ ಅಂತ್ಯದೊಳಗೆ, ಅಕ್ರಮ ಪಡಿತರ ಚೀಟಿಗಳನ್ನು ರದ್ದುಗೊಳಿಸಬೇಕು ಹಾಗೂ ಅರ್ಹರಿಗೆ ಹೊಸದಾಗಿ ಚೀಟಿಗಳ ವಿತರಣೆ ಕ್ರಮ ಕೈಗೊಳ್ಳಬೇಕು. ಕಾಳಸಂತೆಯಲ್ಲಿ ಅಕ್ಕಿ ಮಾರಾಟವಾಗದಂತೆ ನೋಡಿಕೊಳ್ಳಬೇಕು. ಅಕ್ಕಿ ಜೊತೆಗೆ ರಾಗಿ, ಜೋಳ, ಗೋಧಿ ಅಥವಾ ಏನು ಬೇಕು ಎನ್ನುವ ಬಗ್ಗೆ ಜನರಿಂದ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಹೇಳಿದರು.