ಕಾರಗೃಹದ ಚೀಫ್ ಸೂಪರಿಂಟೆಂಡೆಂಟ್ ಟಿ.ಪಿ. ಶೇಷ ಮಾತನಾಡಿ, ‘ಜೈಲಿನಿಂದ ಬಿಡುಗಡೆಯಾದ ಬಳಿಕ ಆರ್ಥಿಕವಾಗಿ ಸಬಲರಾಗಲು ಹಾಗೂ ಬದುಕು ರೂಪಿಸಿಕೊಳ್ಳಲು ನೆರವಾಗುವ ಉದ್ದೇಶದಿಂದ ಸರ್ಕಾರ, ಸರ್ಕಾರೇತರ ಸಂಘ ಸಂಸ್ಥೆಗಳ ಸಯೋಗದೊಂದಿಗೆ ವಿವಿಧ ತರಬೇತಿಗಳನ್ನು ನಿವಾಸಿಗಳಿಗೆ ಆಯೋಜಿಸಲಾಗುತ್ತಿದೆ. ಇವು ಅವರ ಆತ್ಮಸ್ಥೈರ್ಯ ಹೆಚ್ಚಿಸುತ್ತವೆ. ಪೇಪರ್ ಬ್ಯಾಗ್ ತಯಾರಿಕೆಗೆ ಹೆಚ್ಚಿನ ಬಂಡವಾಳ ಬೇಕಾಗುವುದಿಲ್ಲ. ಮನೆಯಲ್ಲಿ ಇರುವ ರದ್ದಿ ಪೇಪರ್ಗಳಿಂದಲೇ ತಯಾರಿಸಬಹುದು. ಪ್ಲಾಸ್ಟಿಕ್ ತ್ಯಜಿಸುವ ನಿಟ್ಟಿನಲ್ಲಿ ಪೇಪರ್ ಬ್ಯಾಗ್ಗಳನ್ನು ಬಳಸುವುದು ಮಹತ್ವದ್ದಾಗಿದೆ’ ಎಂದರು.