‘ಗ್ರಾಮದಲ್ಲಿ ಪರಿಹಾರ ಕೋರಿ 43 ಮಂದಿ ಮನವಿ ಸಲ್ಲಿಸಿದ್ದರು. ಆದರೆ, ಅಧಿಕಾರಿಗಳು ಅರ್ಜಿಗಳನ್ನು ಸರಿಯಾಗಿ ಪರಿಶೀಲಿಸಿದೆ, ಬಿದ್ದಿರುವ ಮನೆಗಳನ್ನು ನೋಡದೆ ಯಾರಿಗೆ ಬೇಕೋ ಅವರಿಗೆ ಮಾತ್ರ ಸಂಪೂರ್ಣ ಮನೆ ಕಟ್ಟಿಕೊಳ್ಳಲು ಹಣ ಬರುವಂತೆ ಮಾಡಿದ್ದಾರೆ. ಆದರೆ, ನಿಜವಾಗಿಯೂ ಸಂಪೂರ್ಣವಾಗಿ ಮನೆ ಬಿದ್ದು ಹೋದವರಿಗೆ ಸರ್ಕಾರದಿಂದ ಪರಿಹಾರ ದೊರೆತಿಲ್ಲ. ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ. ಹಣ ಕೊಟ್ಟವರಿಗೆ ಮಾತ್ರ ಹೆಚ್ಚಿನ ಪರಿಹಾರಕ್ಕೆ ಮಂಜೂರು ಮಾಡಿದ್ದಾರೆ. ಗೋಡೆ ಬಿರುಕು ಬಿಟ್ಟಿದ್ದವರಿಗೂ ಪರಿಹಾರ ಕೊಡಿಸಿದ್ದಾರೆ’ ಎಂದು ಆರೋಪಿಸಿದರು.