ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪ್ರವಾಹದ ಮುನ್ನೆಚ್ಚರಿಕೆ ಕ್ರಮವಾಗಿ, ನದಿ ತೀರದಲ್ಲಿರುವ ಪಾಶ್ಚಾಪೂರ, ಕುಂದರಗಿ, ಮಾವನೂರ, ಗೊಡಚಿನಮಲ್ಕಿ ಮುಂತಾದ ಗ್ರಾಮಗಳಲ್ಲಿ ವಾಸಿಸುತ್ತಿರುವ ಜನರಿಗೆ ಎಚ್ಚರಿಕೆಯಿಂದಿರಲು ಹಾಗೂ ಎತ್ತರದ ಸ್ಥಳಗಳಿಗೆ ಹೋಗಲು ಗ್ರಾಮ ಪಂಚಾಯಿತಿಗಳ ಮುಖಾಂತರ ಡಂಗುರ ಹಾಗೂ ಧ್ವನಿವರ್ಧಕ ಮೂಲಕ ಸೂಚನೆ ನೀಡಲಾಗಿದೆ.