<p><strong>ಹುಕ್ಕೇರಿ</strong>: ತಾಲ್ಲೂಕಿನ ಪಾಶ್ಚಾಪುರ ಗ್ರಾಮದಲ್ಲಿ ಇರುವ ಗ್ರಾಮ ಲೆಕ್ಕಾಧಿಕಾರಿ ಕಚೇರಿ ಶಿಥಿಲಾವಸ್ಥೆಯಲ್ಲಿದ್ದು, ಹೊಸ ಕಟ್ಟಡ ನಿರ್ಮಿಸಬೇಕು ಎಂದು ಪಾಶ್ಚಾಪುರ ಗ್ರಾಮ ಪಂಚಾಯತಿ ಸದಸ್ಯ ಜಾಕೀರ ದಸ್ತಗೀರಸಾಬ ನದಾಫ ಅವರು ಈಚೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.</p>.<p>‘ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಪಾಶ್ಚಾಪುರ ಗ್ರಾಮದಲ್ಲಿ ಗ್ರಾಮ ಲೆಕ್ಕಾಧಿಕಾರಿ ಕಚೇರಿ ಕಟ್ಟಡವು ಸಂಪೂರ್ಣ ಬಿದ್ದು ಹೋಗಿದೆ. ಮೂರು ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿ ಕಚೇರಿ ಕೆಲಸ ನಡೆಯುತ್ತಿದೆ. ಕಂದಾಯ ಇಲಾಖೆಯ ಕಟ್ಟಡವಾಗಿದ್ದು ಅಲ್ಲಿ ಹೊಸ ಕಟ್ಟಡ ನಿರ್ಮಿಸಬೇಕು’ ಎಂದು ಮನವಿ ಮಾಡಿದ್ದಾರೆ.</p>.<p>‘ಬಹಳ ವರ್ಷಗಳಿಂದ ಪಾಶ್ಚಾಪುರ ಗ್ರಾಮದಲ್ಲಿ ನಿವೇಶನದ ಬೇಡಿಕೆ ಇದ್ದು, ಇಲ್ಲಿನ ಜನಸಾಮಾನ್ಯರಿಗೆ ಗ್ರಾಮಮಟ್ಟದಲ್ಲಿ ನಿವೇಶನ ನೀಡುವಂತೆ ಬೆಳಗಾವಿ ಜಿಲ್ಲಾಧಿಕಾರಿಗೆ ಆದೇಶ ನೀಡಬೇಕು. 11ಎ 11ಬಿ ಆಸ್ತಿಯ ಈಗಿನ ಹೊಸ ‘ಬಿ’ ಖಾತಾ ಉತಾರವನ್ನು ಹುಕ್ಕೇರಿ ತಾಲ್ಲೂಕಿನಾದ್ಯಂತ ಆರಂಭ ಮಾಡಬೇಕೆಂದು ಮನವಿಯಲ್ಲಿ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಕ್ಕೇರಿ</strong>: ತಾಲ್ಲೂಕಿನ ಪಾಶ್ಚಾಪುರ ಗ್ರಾಮದಲ್ಲಿ ಇರುವ ಗ್ರಾಮ ಲೆಕ್ಕಾಧಿಕಾರಿ ಕಚೇರಿ ಶಿಥಿಲಾವಸ್ಥೆಯಲ್ಲಿದ್ದು, ಹೊಸ ಕಟ್ಟಡ ನಿರ್ಮಿಸಬೇಕು ಎಂದು ಪಾಶ್ಚಾಪುರ ಗ್ರಾಮ ಪಂಚಾಯತಿ ಸದಸ್ಯ ಜಾಕೀರ ದಸ್ತಗೀರಸಾಬ ನದಾಫ ಅವರು ಈಚೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.</p>.<p>‘ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಪಾಶ್ಚಾಪುರ ಗ್ರಾಮದಲ್ಲಿ ಗ್ರಾಮ ಲೆಕ್ಕಾಧಿಕಾರಿ ಕಚೇರಿ ಕಟ್ಟಡವು ಸಂಪೂರ್ಣ ಬಿದ್ದು ಹೋಗಿದೆ. ಮೂರು ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿ ಕಚೇರಿ ಕೆಲಸ ನಡೆಯುತ್ತಿದೆ. ಕಂದಾಯ ಇಲಾಖೆಯ ಕಟ್ಟಡವಾಗಿದ್ದು ಅಲ್ಲಿ ಹೊಸ ಕಟ್ಟಡ ನಿರ್ಮಿಸಬೇಕು’ ಎಂದು ಮನವಿ ಮಾಡಿದ್ದಾರೆ.</p>.<p>‘ಬಹಳ ವರ್ಷಗಳಿಂದ ಪಾಶ್ಚಾಪುರ ಗ್ರಾಮದಲ್ಲಿ ನಿವೇಶನದ ಬೇಡಿಕೆ ಇದ್ದು, ಇಲ್ಲಿನ ಜನಸಾಮಾನ್ಯರಿಗೆ ಗ್ರಾಮಮಟ್ಟದಲ್ಲಿ ನಿವೇಶನ ನೀಡುವಂತೆ ಬೆಳಗಾವಿ ಜಿಲ್ಲಾಧಿಕಾರಿಗೆ ಆದೇಶ ನೀಡಬೇಕು. 11ಎ 11ಬಿ ಆಸ್ತಿಯ ಈಗಿನ ಹೊಸ ‘ಬಿ’ ಖಾತಾ ಉತಾರವನ್ನು ಹುಕ್ಕೇರಿ ತಾಲ್ಲೂಕಿನಾದ್ಯಂತ ಆರಂಭ ಮಾಡಬೇಕೆಂದು ಮನವಿಯಲ್ಲಿ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>