ಯೋಗ ಶಿಬಿರದಲ್ಲಿ ಭಾಗವಹಿಸಿದ್ದ ಶಿಬಿರಾರ್ಥಿಗಳಿಗೆ ರುದ್ರಾಕ್ಷಿ ಮತ್ತು ಮಾಸ್ಕ್ ವಿತರಿಸಲಾಯಿತು. ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. ಬೈಲಹೊಂಗಲ ಆರಾದ್ರಿಮಠದ ಡಾ.ಮಹಾಂತೇಶ ಶಾಸ್ತ್ರಿ, ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ, ಡಾ.ಪದ್ಮನಾಭ ದರಬಾರೆ, ಅಮೋಘ್ ಜೈನ, ರೇಣುಕ ಗಡದೇಶ್ವರ ದೇವರು ಇತರರಿದ್ದರು.