ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರಳು ವಿಲೇವಾರಿಗೆ ಅನುಮತಿ: ಜಿಲ್ಲಾಧಿಕಾರಿ

Last Updated 9 ಅಕ್ಟೋಬರ್ 2019, 15:54 IST
ಅಕ್ಷರ ಗಾತ್ರ

ಬೆಳಗಾವಿ: ‘ಪ್ರವಾಹದಿಂದ ಕೃಷಿ ಜಮೀನುಗಳಲ್ಲಿ ಸಂಗ್ರಹವಾಗಿರುವ ಮರಳನ್ನು ಡಿ.31ರ ಅಂತ್ಯದೊಳಗೆ ವಿಲೇವಾರಿ ಮಾಡಲು ಪಟ್ಟಾ ಜಮೀನುಗಳ ಮಾಲೀಕರಿಗೆ ಅನುಮತಿ ನೀಡಲಾಗಿದೆ’ ಎಂದು ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ತಿಳಿಸಿದ್ದಾರೆ.

‘ಮರಳು ವಿಲೇವಾರಿ ಮನವಿ ಮತ್ತು ಷರತ್ತುಗಳ ಕುರಿತು ಜಿಲ್ಲಾಧಿಕಾರಿ ಕಚೇರಿ ಅಥವಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಚೇರಿಯಲ್ಲಿ ಮಾಹಿತಿ ಪಡೆಯಬಹುದು. ಪ್ರಸಕ್ತ ವರ್ಷ ಉಂಟಾದ ಪ್ರವಾಹದಿಂದಾಗಿ ನದಿ ಪಾತ್ರದ ಹಲವು ಕಡೆ ಕೃಷಿ ಜಮೀನುಗಳಲ್ಲಿನ ಫಲವತ್ತಾದ ಮಣ್ಣು ಕೊಚ್ಚಿ ಹೋಗಿ ಮರಳು ಸಂಗ್ರಹವಾಗಿದೆ. ಜಮೀನುಗಳನ್ನು ಕೃಷಿ ಭೂಮಿಯನ್ನಾಗಿ ಪರಿವರ್ತಿಸಲು ಮರಳು ತೆರವುಗೊಳಿಸುವುದು ಅತ್ಯಗತ್ಯವಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

‘ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಮಂತ್ರಾಲಯವು ಹೊರಡಿಸಿರುವ ಮರಳು ಗಣಿಗಾರಿಕೆ ಮಾರ್ಗಸೂಚಿ-2019ರ ಅನ್ವಯ ಪರಿಸರ ವಿಮೋಚನಾ ಪತ್ರದ ವಿನಾಯತಿ ಇರುತ್ತದೆ. ಕರ್ನಾಟಕ ಉಪಖನಿಜ ರಿಯಾಯತಿ ನಿಯಮಾವಳಿಗಳು 1994ರ ನಿಯಮ 56ರ ಅನ್ವಯ ಅಧಿಕಾರ ಚಲಾಯಿಸಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಷರತ್ತು ಮತ್ತು ನಿಬಂಧನೆಗಳ ಮೇರೆಗೆ ಕ್ರಮ ವಹಿಸಲಾಗಿದೆ. ಕೃಷಿ ಜಮೀನುಗಳಲ್ಲಿ ಸಂಗ್ರಹವಾಗಿರುವ ಮರಳು ವಿಲೇವಾರಿಗೆ ಅನುಮತಿ ಕೊಡಲಾಗಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT