‘ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಮಂತ್ರಾಲಯವು ಹೊರಡಿಸಿರುವ ಮರಳು ಗಣಿಗಾರಿಕೆ ಮಾರ್ಗಸೂಚಿ-2019ರ ಅನ್ವಯ ಪರಿಸರ ವಿಮೋಚನಾ ಪತ್ರದ ವಿನಾಯತಿ ಇರುತ್ತದೆ. ಕರ್ನಾಟಕ ಉಪಖನಿಜ ರಿಯಾಯತಿ ನಿಯಮಾವಳಿಗಳು 1994ರ ನಿಯಮ 56ರ ಅನ್ವಯ ಅಧಿಕಾರ ಚಲಾಯಿಸಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಷರತ್ತು ಮತ್ತು ನಿಬಂಧನೆಗಳ ಮೇರೆಗೆ ಕ್ರಮ ವಹಿಸಲಾಗಿದೆ. ಕೃಷಿ ಜಮೀನುಗಳಲ್ಲಿ ಸಂಗ್ರಹವಾಗಿರುವ ಮರಳು ವಿಲೇವಾರಿಗೆ ಅನುಮತಿ ಕೊಡಲಾಗಿದೆ’ ಎಂದು ತಿಳಿಸಿದ್ದಾರೆ.