ಕೇರಳ ಮೂಲದವಾಮದೇವನ್ ಆತ್ಮಹತ್ಯೆಗೆ ಯತ್ನಿಸಿ ಗೊಂದಲ ಸೃಷ್ಟಿಸಿದ ವ್ಯಕ್ತಿ. ‘ರಾಯಬಾಗದ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದೇನೆ. ಆರೂವರೆ ತಿಂಗಳಿನಿಂದ ನನಗೆ ಸಂಬಳ ಬಂದಿಲ್ಲ. ವರ್ಗಾವಣೆಯನ್ನೂ ಮಾಡಲಾಗಿದೆ. ಈ ಬಗ್ಗೆ ಸ್ಥಳೀಯ ಅಧಿಕಾರಿಗಳು ಮತ್ತು ಪೊಲೀಸ್ ಠಾಣೆಗೆ ದೂರು ಕೊಟ್ಟರೂ ಪ್ರಯೋಜನವಾಗಿಲ್ಲ. ಇದರಿಂದ ಜೀವನ ನಿರ್ವಹಣೆಗೆ ಬಹಳ ತೊಂದರೆಯಾಗಿದೆ. ಹೀಗಾಗಿ, ಆತ್ಮಹತ್ಯೆಗೆ ಮುಂದಾದೆ’ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಅವರು ತಿಳಿಸಿದರು.