ಅಥಣಿ ತಾಲ್ಲೂಕು ಉಗಾರ ಕೆ.ಎಚ್. ಗ್ರಾಮದ ಶಿವರಾಜ ಬನಸೋಡೆ (26) ಶಿಕ್ಷೆಗೆ ಒಳಗಾದವರು. 2015ರ ಸೆ. 24ರಂದು ಬಾಲಕಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ಮಹಾರಾಷ್ಟ್ರದ ಗಣಪತಿಪುಳೆಗೆ ಕರೆದುಕೊಂಡು ಹೋಗಿ ಬಾಡಿಗೆ ಮನೆಯಲ್ಲಿರಿಸಿಕೊಂಡಿದ್ದ. ಆಕೆಯ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದ. ಈ ವಿಚಾರವನ್ನು ಯಾರಿಗೂ ಹೇಳದಂತೆ ಜೀವ ಬೆದರಿಕೆ ಹಾಕಿದ್ದ. ಈ ಕುರಿತು ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸಿದ ತನಿಖಾಧಿಕಾರಿ ಆರ್.ಎಸ್. ಬಡೆದೆಸಾರ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.