ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿದ ಅಮಲಿನಲ್ಲಿ ಜಗಳ: ವ್ಯಕ್ತಿ ಕೊಲೆ

Last Updated 2 ಜನವರಿ 2023, 11:12 IST
ಅಕ್ಷರ ಗಾತ್ರ

ಬೈಲಹೊಂಗಲ: ತಾಲ್ಲೂಕಿನ ಆನಿಗೋಳ ಗ್ರಾಮದಲ್ಲಿ ಭಾನುವಾರ ರಾತ್ರಿ ಮದ್ಯ ಕುಡಿದ ಮತ್ತಿನಲ್ಲಿ ಯುವಕನೊಬ್ಬ ವ್ಯಕ್ತಿಯನ್ನು ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ.

ಮಂಜುನಾಥ ರುದ್ರಪ್ಪ ಸುಣಗಾರ (45) ಕೊಲೆಯಾದವರು. ಅಜಯ ಗುರುಸಯ್ಯ ಹಿರೇಮಠ (26) ಆರೋಪಿ.

ಇಬ್ಬರೂ ಮದ್ಯ ಕುಡಿಯಲು ಕುಳಿತಿದ್ದರು. ಅಮಲಿನಲ್ಲಿ ಮಾತಿಗೆ ಮಾತು ಬೆಳೆದು ಜಗಳವಾಡಿದರು. ಈ ವೇಳೆ ಹತ್ತಿರದಲ್ಲಿದ್ದ ದೊಡ್ಡ ಕಲ್ಲು ಎತ್ತಿಕೊಂಡ ಅಜಯ ಮಂಜುನಾಥ ಅವರ ತಲೆ ಮೇಲೆ ಎಸೆದು, ಅಲ್ಲಿಂದ ತಲೆಮರೆಸಿಕೊಂಡಿದ್ದಾನೆ. ತೀವ್ರ ರಕ್ತಸ್ರಾವದಿಂದ ಮಂಜುನಾಥ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೈಲಹೊಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಲೆ ಮರೆಸಿಕೊಂಡ ಆರೋಪಿ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT