<p><strong>ಹಂದಿಗುಂದ:</strong> ‘ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು (ಪಿಕೆಪಿಎಸ್) ರೈತರ ಪಾಲಿನ ಸಂಜೀವಿನಿಯಾಗಿ ಕಾರ್ಯನಿರ್ವಹಿಸುತ್ತಿವೆ. ಸಂಕಷ್ಟದಲ್ಲಿರುವ ಕೃಷಿಕರು ಅವುಗಳಿಂದ ಸಹಾಯ ಪಡೆದು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು’ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಅಪ್ಪಾಸಾಹೇಬ ಕುಲಗುಡೆ ಹೇಳಿದರು.</p>.<p>ರಾಯಬಾಗ ತಾಲ್ಲೂಕು ಹಂದಿಗುಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಈಚೆಗೆ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.</p>.<p>ಸಂಘದ ನಿರ್ದೇಶಕ ಮಲ್ಲಿಕಾರ್ಜುನ ಖಾನಗೌಡ, ‘ಸೊಸೈಟಿಗೆ ಸೇಫ್ ಲಾಕರ್ ವ್ಯವಸ್ಥೆ ಕಲ್ಪಿಸಬೇಕು. ರೈತರು ಪಡೆದಿರುವ ಹಸು, ಎಮ್ಮೆ, ಟ್ರ್ಯಾಕ್ಟರ್ ಮೇಲಿನ ಸಾಲ ಮನ್ನಾ ಮಾಡಲು ಸರ್ಕಾರದ ಆದೇಶದಂತೆ ಕ್ರಮ ಕೈಗೊಳ್ಳಬೇಕು’ ಎಂದು ಕೋರಿದರು.</p>.<p>ಮುಖಂಡ ರಾಮನಗೌಡ ಪಾಟೀಲ, ‘ಪಡಿತರ ಧಾನ್ಯ ಸಂಗ್ರಹಿಸಲು ಗೋದಾಮು, ಸಂಘದ ಕಟ್ಟಡ ನಿರ್ಮಾಣಕ್ಕೆ ವಿಶೇಷ ಅನುದಾನ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ಉಪಾಧ್ಯಕ್ಷ ಆರ್.ಸಿ. ಮಿರ್ಜಿ, ಬಸನಿಂಗಪ್ಪ ಚಿಂಚಲಿ, ಮಹಾಲಿಂಗ ಮರಡಿ, ಬಿ.ಎಸ್. ಘಾಟ್ಯಾಗೊಳ, ಎಂ.ಎಂ. ಅಂದಾನಿ, ಕೆ.ಬಿ. ಮಂಟೂರ, ಲಕ್ಷ್ಮಣ ಚಿನಗುಂಡಿ, ರುದ್ರಪ್ಪ ಭದ್ರಶಟ್ಟಿ, ಮಲ್ಲಪ್ಪ ಬಿಸಗುಪ್ಪಿ, ಶಂಕರ ತಳವಾರ ಇದ್ದರು.</p>.<p>ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಸ್. ನಾಯಿಕ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಂದಿಗುಂದ:</strong> ‘ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು (ಪಿಕೆಪಿಎಸ್) ರೈತರ ಪಾಲಿನ ಸಂಜೀವಿನಿಯಾಗಿ ಕಾರ್ಯನಿರ್ವಹಿಸುತ್ತಿವೆ. ಸಂಕಷ್ಟದಲ್ಲಿರುವ ಕೃಷಿಕರು ಅವುಗಳಿಂದ ಸಹಾಯ ಪಡೆದು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು’ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಅಪ್ಪಾಸಾಹೇಬ ಕುಲಗುಡೆ ಹೇಳಿದರು.</p>.<p>ರಾಯಬಾಗ ತಾಲ್ಲೂಕು ಹಂದಿಗುಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಈಚೆಗೆ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.</p>.<p>ಸಂಘದ ನಿರ್ದೇಶಕ ಮಲ್ಲಿಕಾರ್ಜುನ ಖಾನಗೌಡ, ‘ಸೊಸೈಟಿಗೆ ಸೇಫ್ ಲಾಕರ್ ವ್ಯವಸ್ಥೆ ಕಲ್ಪಿಸಬೇಕು. ರೈತರು ಪಡೆದಿರುವ ಹಸು, ಎಮ್ಮೆ, ಟ್ರ್ಯಾಕ್ಟರ್ ಮೇಲಿನ ಸಾಲ ಮನ್ನಾ ಮಾಡಲು ಸರ್ಕಾರದ ಆದೇಶದಂತೆ ಕ್ರಮ ಕೈಗೊಳ್ಳಬೇಕು’ ಎಂದು ಕೋರಿದರು.</p>.<p>ಮುಖಂಡ ರಾಮನಗೌಡ ಪಾಟೀಲ, ‘ಪಡಿತರ ಧಾನ್ಯ ಸಂಗ್ರಹಿಸಲು ಗೋದಾಮು, ಸಂಘದ ಕಟ್ಟಡ ನಿರ್ಮಾಣಕ್ಕೆ ವಿಶೇಷ ಅನುದಾನ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ಉಪಾಧ್ಯಕ್ಷ ಆರ್.ಸಿ. ಮಿರ್ಜಿ, ಬಸನಿಂಗಪ್ಪ ಚಿಂಚಲಿ, ಮಹಾಲಿಂಗ ಮರಡಿ, ಬಿ.ಎಸ್. ಘಾಟ್ಯಾಗೊಳ, ಎಂ.ಎಂ. ಅಂದಾನಿ, ಕೆ.ಬಿ. ಮಂಟೂರ, ಲಕ್ಷ್ಮಣ ಚಿನಗುಂಡಿ, ರುದ್ರಪ್ಪ ಭದ್ರಶಟ್ಟಿ, ಮಲ್ಲಪ್ಪ ಬಿಸಗುಪ್ಪಿ, ಶಂಕರ ತಳವಾರ ಇದ್ದರು.</p>.<p>ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಸ್. ನಾಯಿಕ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>