ಪಾಲಭಾಂವಿ ಘಟಪ್ರಭಾ ಎಡದಂಡೆ ಕಾಲುವೆ, ಮಾದಾರ ಚನ್ನಯ್ಯ ನಗರ ಪ್ಲಾಟ್ ಹತ್ತಿರ ಹಾಗೂ ಮಲಗೌಡ ನೇಮಿನಾಥ ಪಾಟೀಲ, ನಾಯಕ ಸರ್ಕಾರಿ ಪ್ರೌಢಶಾಲೆ ಬಳಿ ಸೇತುವೆಯನ್ನು ಎತ್ತರದಲ್ಲಿ ನಿರ್ಮಿಸಿರುವ ಪರಿಣಾಮ ಟ್ರ್ಯಾಕ್ಟರ್, ಭಾರಿ ವಾಹನಗಳು ಸಂಚರಿಸಲು ಸಾಧ್ಯವಾಗುತ್ತಿಲ್ಲ. ಸೇತುವೆ ಬಳಿ ಡಾಂಬರು ಹಾಕದಿರುವುದುದು ಅಥವಾ ಕಾಂಕ್ರೀಟ್ ರಸ್ತೆ ನಿರ್ಮಿಸದೆ ಇರುವುದರಿಂದಾಗಿಯೂ ತೊಂದರೆ ಆಗುತ್ತಿದೆ. ಇದಕ್ಕೆ ಅವೈಜ್ಞಾನಿಕ ಹಾಗೂ ಕಳಪೆಕಾಮಗಾರಿಯೇ ಕಾರಣ ಎನ್ನುವುದು ಜನರ ದೂರಾಗಿದೆ.