<p><strong>ಬೆಳಗಾವಿ</strong>: ‘ಬೆಳಗಾವಿಯಲ್ಲಿ ಜಿಲ್ಲಾ ಪಂಚಾಯಿತಿ ನಡೆಸುತ್ತಿರುವ ಪ್ರತಿಭಾನ್ವೇಷಣೆ (ಟ್ಯಾಲೆಂಟ್ ಸರ್ಚ್) ಪರೀಕ್ಷೆ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ರಾಜ್ಯದಲ್ಲಿ ವಿವಿಧ ಹಂತಗಳಲ್ಲಿ ಅದನ್ನು ನಡೆಸಲು ಯೋಜಿಸಲಾಗುವುದು’ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.</p><p>ಇಲ್ಲಿನ ಸುವರ್ಣ ವಿಧಾನಸೌಧದ ಸೆಂಟ್ರಲ್ ಹಾಲ್ನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಾನ್ವೇಷಣೆ ಪರೀಕ್ಷೆಯಲ್ಲಿ ಸಾಧನೆಗೈದವರಿಗೆ ಅಭಿನಂದನಾ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p><p>‘ಈ ಪರೀಕ್ಷೆಯಿಂದ ಬೆಳಗಾವಿ ಜಿಲ್ಲೆ ಮಕ್ಕಳಿಗಷ್ಟೇ ಅನುಕೂಲವಾದರೆ ಸಾಲದು. ರಾಜ್ಯಮಟ್ಟದಲ್ಲಿ ಪ್ರತಿ ಮಗುವಿಗೆ ಅನುಕೂಲವಾಗುವ ರೀತಿ ಕ್ರಮ ವಹಿಸಲಾಗುವುದು’ ಎಂದರು.</p><p>ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ, ‘ಶಾಲಾ ಹಂತದಲ್ಲೇ ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ಪ್ರತಿಭಾನ್ವೇಷಣೆ ಪರೀಕ್ಷೆ ನಡೆಸುತ್ತಿರುವುದು ಉತ್ತಮ ಬೆಳವಣಿಗೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಮಕ್ಕಳು ಪರೀಕ್ಷೆಗೆ ಹಾಜರಾಗಬೇಕು’ ಎಂದು ಕೋರಿದರು.</p><p>ಎಸ್.ಎಲ್.ಭೋಜೇಗೌಡ, ಶಾಸಕ ಆಸಿಫ್ ಸೇಠ್ ಮಾತನಾಡಿದರು.</p><p>ಈ ಪರೀಕ್ಷೆ ಎದುರಿಸಿದ 52 ಸಾವಿರ ವಿದ್ಯಾರ್ಥಿಗಳ ಪೈಕಿ, ಹೆಚ್ಚು ಅಂಕ ಗಳಿಸಿದ 122 ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ನೀಡಲಾಯಿತು.</p><p>ಶಾಸಕರಾದ ಗಣೇಶ ಹುಕ್ಕೇರಿ, ಮಹಾಂತೇಶ ಕೌಜಲಗಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಬೆಳಗಾವಿ ಡಿಡಿಪಿಐ ಲೀಲಾವತಿ ಹಿರೇಮಠ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಬೆಳಗಾವಿಯಲ್ಲಿ ಜಿಲ್ಲಾ ಪಂಚಾಯಿತಿ ನಡೆಸುತ್ತಿರುವ ಪ್ರತಿಭಾನ್ವೇಷಣೆ (ಟ್ಯಾಲೆಂಟ್ ಸರ್ಚ್) ಪರೀಕ್ಷೆ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ರಾಜ್ಯದಲ್ಲಿ ವಿವಿಧ ಹಂತಗಳಲ್ಲಿ ಅದನ್ನು ನಡೆಸಲು ಯೋಜಿಸಲಾಗುವುದು’ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.</p><p>ಇಲ್ಲಿನ ಸುವರ್ಣ ವಿಧಾನಸೌಧದ ಸೆಂಟ್ರಲ್ ಹಾಲ್ನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಾನ್ವೇಷಣೆ ಪರೀಕ್ಷೆಯಲ್ಲಿ ಸಾಧನೆಗೈದವರಿಗೆ ಅಭಿನಂದನಾ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p><p>‘ಈ ಪರೀಕ್ಷೆಯಿಂದ ಬೆಳಗಾವಿ ಜಿಲ್ಲೆ ಮಕ್ಕಳಿಗಷ್ಟೇ ಅನುಕೂಲವಾದರೆ ಸಾಲದು. ರಾಜ್ಯಮಟ್ಟದಲ್ಲಿ ಪ್ರತಿ ಮಗುವಿಗೆ ಅನುಕೂಲವಾಗುವ ರೀತಿ ಕ್ರಮ ವಹಿಸಲಾಗುವುದು’ ಎಂದರು.</p><p>ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ, ‘ಶಾಲಾ ಹಂತದಲ್ಲೇ ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ಪ್ರತಿಭಾನ್ವೇಷಣೆ ಪರೀಕ್ಷೆ ನಡೆಸುತ್ತಿರುವುದು ಉತ್ತಮ ಬೆಳವಣಿಗೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಮಕ್ಕಳು ಪರೀಕ್ಷೆಗೆ ಹಾಜರಾಗಬೇಕು’ ಎಂದು ಕೋರಿದರು.</p><p>ಎಸ್.ಎಲ್.ಭೋಜೇಗೌಡ, ಶಾಸಕ ಆಸಿಫ್ ಸೇಠ್ ಮಾತನಾಡಿದರು.</p><p>ಈ ಪರೀಕ್ಷೆ ಎದುರಿಸಿದ 52 ಸಾವಿರ ವಿದ್ಯಾರ್ಥಿಗಳ ಪೈಕಿ, ಹೆಚ್ಚು ಅಂಕ ಗಳಿಸಿದ 122 ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ನೀಡಲಾಯಿತು.</p><p>ಶಾಸಕರಾದ ಗಣೇಶ ಹುಕ್ಕೇರಿ, ಮಹಾಂತೇಶ ಕೌಜಲಗಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಬೆಳಗಾವಿ ಡಿಡಿಪಿಐ ಲೀಲಾವತಿ ಹಿರೇಮಠ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>