<p><strong>ಬೆಳಗಾವಿ:</strong> ‘ಘಟಪ್ರಭಾ ಬಲದಂಡೆ ಕಾಲುವೆಯ ಆಯ್ದ ಭಾಗಗಳ ಆಧುನೀಕರಣ ಕಾಮಗಾರಿ ಕೈಗೆತ್ತಿಕೊಳ್ಳಲು ₹ 702 ಕೋಟಿ ಮೊತ್ತದ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.</p>.<p>ಜಿಲ್ಲಾಡಳಿತದಿಂದ ಇಲ್ಲಿನ ನೆಹರೂ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಗಣರಾಜ್ಯೋತ್ಸವದಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.</p>.<p>‘8 ಏತ ನೀರಾವರಿ ಯೋಜನೆಗಳು ಚಾಲ್ತಿಯಲ್ಲಿವೆ. ಈ ಪೈಕಿ ತುಬಚಿ–ಬಬಲೇಶ್ವರ ಹಂತ–1 ಮತ್ತು ಹಂತ–2, ಗೊಡಚಿನಮಲ್ಕಿ ಹಂತ–1ರ ಪ್ರಮುಖ ಕಾಮಗಾರಿಗಳು ಪೂರ್ಣಗೊಂಡಿವೆ. ಬಸವೇಶ್ವರ ಏತ ನೀರಾವರಿ ಯೋಜನೆಯಲ್ಲಿಈವರೆಗೆ 46ಸಾವಿರ ಹೆಕ್ಟೇರ್ ತೂಬುಗಾಲುವೆ ಕ್ಷೇತ್ರ ಸೃಷ್ಟಿಸಲಾಗಿದೆ’ ಎಂದು ಹೇಳಿದರು.</p>.<p><strong>ಪರಿಹಾರಕ್ಕೆ ಶಿಫಾರಸು: </strong>‘22,524 ವಿದ್ಯುತ್ ಮಗ್ಗ ನೇಕಾರರಿಗೆ 2021–22ನೇ ಸಾಲಿನಲ್ಲಿ ಕೋವಿಡ್ 2ನೇ ಅಲೆ ಪ್ರಯುಕ್ತ ಒಂದು ಬಾರಿಯ ಪರಿಹಾರ ಯೋಜನೆಯಲ್ಲಿ ತಲಾ ₹ 3ಸಾವಿರ ಪರಿಹಾರಕ್ಕೆ ಶಿಫಾರಸು ಮಾಡಲಾಗಿದೆ’ ಎಂದು ತಿಳಿಸಿದರು.</p>.<p>ಶಾಸಕ ಅನಿಲ ಬೆನಕೆ, ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್, ಜಿ.ಪಂ. ಸಿಇಒ ಎಚ್.ವಿ. ದರ್ಶನ್, ಎಸ್ಪಿ ಲಕ್ಷ್ಮಣ ನಿಂಬರಗಿ, ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ. ಬೋರಲಿಂಗಯ್ಯ, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಪಾಲ್ಗೊಂಡಿದ್ದರು.</p>.<p>ಇದಕ್ಕೂ ಮುನ್ನ ಪೊಲೀಸರಿಂದ ಆಕರ್ಷಕ ಪಥಸಂಚಲನ ನಡೆಯಿತು. ಕೋವಿಡ್ ಕಾರಣದಿಂದ ಕಾರ್ಯಕ್ರಮ ಸರಳವಾಗಿ ನಡೆಯಿತು.</p>.<p><strong>‘9 ಹೊಸ ಏತ ನೀರಾವರಿ’</strong><br />‘ಪ್ರಸ್ತುತ 5 ಕೆರೆ ತುಂಬುವ ಯೋಜನೆಗಳು ಚಾಲ್ತಿಯಲ್ಲಿವೆ. ಇದರಿಂದ 125 ಕೆರೆಗಳನ್ನು ಮಳೆಗಾಲದಲ್ಲಿ ತುಂಬಿಸುವ ಗುರಿ ಹೊಂದಲಾಗಿದೆ. 9 ಹೊಸ ಏತ ನೀರಾವರಿ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಪ್ರಸ್ತಾವ ಸಲ್ಲಿಸಲಾಗಿದೆ. ಇದಕ್ಕೆ ಒಟ್ಟು 9.69 ಟಿಎಂಸಿ ನೀರಿನ ಹಂಚಿಕೆಯ ಅಗತ್ಯವಿದೆ’ ಎಂದು ಸಚಿವರು ತಿಳಿಸಿದರು.</p>.<p>‘2021ರ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ 98,677 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಗೊಳಗಾಗಿದೆ. 1,09,428 ರೈತರಿಗೆ ಎನ್ಡಿಆರ್ಎಫ್ ಮಾರ್ಗಸೂಚಿ ಪ್ರಕಾರ ₹ 94.80 ಕೋಟಿಯನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ಹಿಂಗಾರು ಹಂಗಾಮಿನಲ್ಲಿ 86ಸಾವಿರ ರೈತರಿಗೆ 20,718 ಕ್ವಿಂಟಲ್ ಬಿತ್ತನೆ ಬೀಜಗಳನ್ನು ಪೂರೈಸಲಾಗಿದ್ದು, ಇದಕ್ಕಾಗಿ ₹ 12.57 ಕೋಟಿ ಸಹಾಯಧನ ಪಾವತಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p><strong>‘₹ 1,205.31 ಕೋಟಿ ಜಮಾ’</strong><br />‘ರೈತರ ಆದಾಯ ಹೆಚ್ಚಿಸುವ ಉದ್ದೇಶದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಲ್ಲಿ ಜಿಲ್ಲೆಗೆ ಆರಂಭದಿಂದ ಇಲ್ಲಿವರೆಗೆ 5.56 ಲಕ್ಷ ಮಂದಿಗೆ ₹ 1,205.31 ಕೋಟಿ ಜಮಾ ಮಾಡಲಾಗಿದೆ’ ಎಂದುಕಾರಜೋಳ ತಿಳಿಸಿದರು.</p>.<p>ಸಹಕಾರ ಇಲಾಖೆ ವತಿಯಿಂದ ₹ 1 ಲಕ್ಷವರೆಗಿನ ಸಾಲ ಮನ್ನಾ ಯೋಜನೆಯಲ್ಲಿ 2.87 ಲಕ್ಷ ರೈತರ ₹ 1,162 ಕೋಟಿ ಸಾಲ ಮನ್ನಾ ಮೊತ್ತದ ಪೈಕಿ ಇದುವರೆಗೆ 2.65 ಲಕ್ಷ ರೈತರ ₹ 1,049 ಕೋಟಿ ಬಿಡುಗಡೆಯಾಗಿದೆ. 2021–22ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 33ಸಾವಿರ ರೈತ ಸದಸ್ಯರಿಂದ 468.67 ಲಕ್ಷ ಲೀಟರ್ ಹಾಲು ಸಂಗ್ರಹಿಸಿ ₹ 17 ಕೋಟಿ ಪ್ರೋತ್ಸಾಹಧನ ನೀಡಲಾಗಿದೆ’ ಎಂದು ಹೇಳಿದರು.</p>.<p>‘2021ರ ಜುಲೈ ಹಾಗೂ ನವೆಂಬರ್ನಲ್ಲಿ ಉಂಟಾದ ಅತಿವೃಷ್ಟಿ, ಪ್ರವಾಹದಿಂದ 1.50 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. 1,15,383 ರೈತರಿಗೆ ₹ 94.8 ಕೋಟಿ ಮೊತ್ತವನ್ನು ಪರಿಹಾರ ತಂತ್ರಾಂಶದ ಮೂಲಕ ನೇರವಾಗಿ ಖಾತೆಗಳಿಗೆ ನೀಡಲು ದೃಢೀಕರಣ ಮಾಡಲಾಗಿದೆ’ ಎಂದರು.</p>.<p><strong>ನಿರ್ದಾಕ್ಷಿಣ್ಯ ಕ್ರಮ</strong><br />ಗಣತಂತ್ರ ವ್ಯವಸ್ಥೆಯಲ್ಲಿ ಬದುಕುತ್ತಿರುವ ಜನರಿಗೆ ಕೆಲವರು ಭಾಷೆ, ಧರ್ಮ, ಜಾತಿ ಮೊದಲಾದ ಭಾವನಾತ್ಮಕ ವಿಷಯಗಳನ್ನಿಟ್ಟುಕೊಂಡು ತೊಂದರೆ ಕೊಡುತ್ತಿದ್ದಾರೆ. ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಖಚಿತ.<br /><em><strong>–ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಘಟಪ್ರಭಾ ಬಲದಂಡೆ ಕಾಲುವೆಯ ಆಯ್ದ ಭಾಗಗಳ ಆಧುನೀಕರಣ ಕಾಮಗಾರಿ ಕೈಗೆತ್ತಿಕೊಳ್ಳಲು ₹ 702 ಕೋಟಿ ಮೊತ್ತದ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.</p>.<p>ಜಿಲ್ಲಾಡಳಿತದಿಂದ ಇಲ್ಲಿನ ನೆಹರೂ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಗಣರಾಜ್ಯೋತ್ಸವದಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.</p>.<p>‘8 ಏತ ನೀರಾವರಿ ಯೋಜನೆಗಳು ಚಾಲ್ತಿಯಲ್ಲಿವೆ. ಈ ಪೈಕಿ ತುಬಚಿ–ಬಬಲೇಶ್ವರ ಹಂತ–1 ಮತ್ತು ಹಂತ–2, ಗೊಡಚಿನಮಲ್ಕಿ ಹಂತ–1ರ ಪ್ರಮುಖ ಕಾಮಗಾರಿಗಳು ಪೂರ್ಣಗೊಂಡಿವೆ. ಬಸವೇಶ್ವರ ಏತ ನೀರಾವರಿ ಯೋಜನೆಯಲ್ಲಿಈವರೆಗೆ 46ಸಾವಿರ ಹೆಕ್ಟೇರ್ ತೂಬುಗಾಲುವೆ ಕ್ಷೇತ್ರ ಸೃಷ್ಟಿಸಲಾಗಿದೆ’ ಎಂದು ಹೇಳಿದರು.</p>.<p><strong>ಪರಿಹಾರಕ್ಕೆ ಶಿಫಾರಸು: </strong>‘22,524 ವಿದ್ಯುತ್ ಮಗ್ಗ ನೇಕಾರರಿಗೆ 2021–22ನೇ ಸಾಲಿನಲ್ಲಿ ಕೋವಿಡ್ 2ನೇ ಅಲೆ ಪ್ರಯುಕ್ತ ಒಂದು ಬಾರಿಯ ಪರಿಹಾರ ಯೋಜನೆಯಲ್ಲಿ ತಲಾ ₹ 3ಸಾವಿರ ಪರಿಹಾರಕ್ಕೆ ಶಿಫಾರಸು ಮಾಡಲಾಗಿದೆ’ ಎಂದು ತಿಳಿಸಿದರು.</p>.<p>ಶಾಸಕ ಅನಿಲ ಬೆನಕೆ, ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್, ಜಿ.ಪಂ. ಸಿಇಒ ಎಚ್.ವಿ. ದರ್ಶನ್, ಎಸ್ಪಿ ಲಕ್ಷ್ಮಣ ನಿಂಬರಗಿ, ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ. ಬೋರಲಿಂಗಯ್ಯ, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಪಾಲ್ಗೊಂಡಿದ್ದರು.</p>.<p>ಇದಕ್ಕೂ ಮುನ್ನ ಪೊಲೀಸರಿಂದ ಆಕರ್ಷಕ ಪಥಸಂಚಲನ ನಡೆಯಿತು. ಕೋವಿಡ್ ಕಾರಣದಿಂದ ಕಾರ್ಯಕ್ರಮ ಸರಳವಾಗಿ ನಡೆಯಿತು.</p>.<p><strong>‘9 ಹೊಸ ಏತ ನೀರಾವರಿ’</strong><br />‘ಪ್ರಸ್ತುತ 5 ಕೆರೆ ತುಂಬುವ ಯೋಜನೆಗಳು ಚಾಲ್ತಿಯಲ್ಲಿವೆ. ಇದರಿಂದ 125 ಕೆರೆಗಳನ್ನು ಮಳೆಗಾಲದಲ್ಲಿ ತುಂಬಿಸುವ ಗುರಿ ಹೊಂದಲಾಗಿದೆ. 9 ಹೊಸ ಏತ ನೀರಾವರಿ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಪ್ರಸ್ತಾವ ಸಲ್ಲಿಸಲಾಗಿದೆ. ಇದಕ್ಕೆ ಒಟ್ಟು 9.69 ಟಿಎಂಸಿ ನೀರಿನ ಹಂಚಿಕೆಯ ಅಗತ್ಯವಿದೆ’ ಎಂದು ಸಚಿವರು ತಿಳಿಸಿದರು.</p>.<p>‘2021ರ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ 98,677 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಗೊಳಗಾಗಿದೆ. 1,09,428 ರೈತರಿಗೆ ಎನ್ಡಿಆರ್ಎಫ್ ಮಾರ್ಗಸೂಚಿ ಪ್ರಕಾರ ₹ 94.80 ಕೋಟಿಯನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ಹಿಂಗಾರು ಹಂಗಾಮಿನಲ್ಲಿ 86ಸಾವಿರ ರೈತರಿಗೆ 20,718 ಕ್ವಿಂಟಲ್ ಬಿತ್ತನೆ ಬೀಜಗಳನ್ನು ಪೂರೈಸಲಾಗಿದ್ದು, ಇದಕ್ಕಾಗಿ ₹ 12.57 ಕೋಟಿ ಸಹಾಯಧನ ಪಾವತಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p><strong>‘₹ 1,205.31 ಕೋಟಿ ಜಮಾ’</strong><br />‘ರೈತರ ಆದಾಯ ಹೆಚ್ಚಿಸುವ ಉದ್ದೇಶದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಲ್ಲಿ ಜಿಲ್ಲೆಗೆ ಆರಂಭದಿಂದ ಇಲ್ಲಿವರೆಗೆ 5.56 ಲಕ್ಷ ಮಂದಿಗೆ ₹ 1,205.31 ಕೋಟಿ ಜಮಾ ಮಾಡಲಾಗಿದೆ’ ಎಂದುಕಾರಜೋಳ ತಿಳಿಸಿದರು.</p>.<p>ಸಹಕಾರ ಇಲಾಖೆ ವತಿಯಿಂದ ₹ 1 ಲಕ್ಷವರೆಗಿನ ಸಾಲ ಮನ್ನಾ ಯೋಜನೆಯಲ್ಲಿ 2.87 ಲಕ್ಷ ರೈತರ ₹ 1,162 ಕೋಟಿ ಸಾಲ ಮನ್ನಾ ಮೊತ್ತದ ಪೈಕಿ ಇದುವರೆಗೆ 2.65 ಲಕ್ಷ ರೈತರ ₹ 1,049 ಕೋಟಿ ಬಿಡುಗಡೆಯಾಗಿದೆ. 2021–22ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 33ಸಾವಿರ ರೈತ ಸದಸ್ಯರಿಂದ 468.67 ಲಕ್ಷ ಲೀಟರ್ ಹಾಲು ಸಂಗ್ರಹಿಸಿ ₹ 17 ಕೋಟಿ ಪ್ರೋತ್ಸಾಹಧನ ನೀಡಲಾಗಿದೆ’ ಎಂದು ಹೇಳಿದರು.</p>.<p>‘2021ರ ಜುಲೈ ಹಾಗೂ ನವೆಂಬರ್ನಲ್ಲಿ ಉಂಟಾದ ಅತಿವೃಷ್ಟಿ, ಪ್ರವಾಹದಿಂದ 1.50 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. 1,15,383 ರೈತರಿಗೆ ₹ 94.8 ಕೋಟಿ ಮೊತ್ತವನ್ನು ಪರಿಹಾರ ತಂತ್ರಾಂಶದ ಮೂಲಕ ನೇರವಾಗಿ ಖಾತೆಗಳಿಗೆ ನೀಡಲು ದೃಢೀಕರಣ ಮಾಡಲಾಗಿದೆ’ ಎಂದರು.</p>.<p><strong>ನಿರ್ದಾಕ್ಷಿಣ್ಯ ಕ್ರಮ</strong><br />ಗಣತಂತ್ರ ವ್ಯವಸ್ಥೆಯಲ್ಲಿ ಬದುಕುತ್ತಿರುವ ಜನರಿಗೆ ಕೆಲವರು ಭಾಷೆ, ಧರ್ಮ, ಜಾತಿ ಮೊದಲಾದ ಭಾವನಾತ್ಮಕ ವಿಷಯಗಳನ್ನಿಟ್ಟುಕೊಂಡು ತೊಂದರೆ ಕೊಡುತ್ತಿದ್ದಾರೆ. ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಖಚಿತ.<br /><em><strong>–ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>