<p class="rtejustify"><strong>ಬೆಳಗಾವಿ:</strong> ‘ರಾಜ್ಯದಲ್ಲಿರುವ ಖನಿಜ ಸಂಪತ್ತಿನ ಸಮಗ್ರ ಸಮೀಕ್ಷೆಗೆ ಅಂತರರಾಷ್ಟ್ರೀಯ ಟೆಂಡರ್ ಕರೆಯಲಾಗಿದೆ’ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ ನಿರಾಣಿ ತಿಳಿಸಿದರು.</p>.<p class="rtejustify">ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p class="rtejustify">‘ಸಮೀಕ್ಷೆಯಿಂದ, ನಮ್ಮಲ್ಲಿರುವ ಒಟ್ಟಾರೆ ಖನಿಜ ಸಂಪತ್ತಿನ ಪ್ರಮಾಣದ ನಿಖರ ಮಾಹಿತಿ ದೊರೆಯಲಿದೆ. ಇದರಿಂದ ಅದರ ಸಮರ್ಪಕ ಬಳಕೆಯ ಯೋಜನೆ ರೂಪಿಸಬಹುದು’ ಎಂದು ಹೇಳಿದರು.</p>.<p class="rtejustify">‘ಈಗ, 50 ವರ್ಷಗಳ ಹಿಂದಿನ ಸಮೀಕ್ಷೆ ಆಧರಿಸಿ ಖನಿಜ ಸಂಪತ್ತು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಆದರೆ, ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ಸಮೀಕ್ಷೆ ನಡೆಸುವ ಮೂಲಕ ಖನಿಜ ಸಂಪತ್ತು ಪತ್ತೆ ಹಚ್ಚಿದಾಗ ಪ್ರಸ್ತುತ ಸನ್ನಿವೇಶದಲ್ಲಿ ಕರ್ನಾಟಕ ಅತ್ಯಂತ ಶ್ರೀಮಂತ ರಾಜ್ಯ ಎನಿಸಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p class="rtejustify">‘ಖನಿಜ ಸಂಪತ್ತಿನ ಸದ್ಬಳಕೆ ಜೊತೆಗೆ ಉದ್ಯೋಗಗಳನ್ನು ಸೃಷ್ಟಿಸುವುದು ಕೂಡ ನನ್ನ ಆದ್ಯತೆಯಾಗಿದೆ’ ಎಂದು ತಿಳಿಸಿದರು.</p>.<p class="rtejustify">‘ಮರಳನ್ನು ಗ್ರೇಡ್ ಪ್ರಕಾರ ವಿಂಗಡಿಸಿ ಅಗತ್ಯತೆ ಆಧರಿಸಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಮಿತಿಗಳ ಮೂಲಕ ವಿತರಣೆಗೆ ಅನುಕೂಲ ಆಗುವಂತೆ ‘ಮರಳು ನಿಗಮ’ (ಸ್ಯಾಂಡ್ ಕಾರ್ಪೋರೇಷನ್) ಸ್ಥಾಪನೆ ಚಿಂತನೆ ಇದೆ. ಶೀಘ್ರವೇ ಕಾರ್ಯಕತಗೊಳಿಸಲು ಕ್ರಮ ವಹಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="rtejustify"><strong>ಬೆಳಗಾವಿ:</strong> ‘ರಾಜ್ಯದಲ್ಲಿರುವ ಖನಿಜ ಸಂಪತ್ತಿನ ಸಮಗ್ರ ಸಮೀಕ್ಷೆಗೆ ಅಂತರರಾಷ್ಟ್ರೀಯ ಟೆಂಡರ್ ಕರೆಯಲಾಗಿದೆ’ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ ನಿರಾಣಿ ತಿಳಿಸಿದರು.</p>.<p class="rtejustify">ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p class="rtejustify">‘ಸಮೀಕ್ಷೆಯಿಂದ, ನಮ್ಮಲ್ಲಿರುವ ಒಟ್ಟಾರೆ ಖನಿಜ ಸಂಪತ್ತಿನ ಪ್ರಮಾಣದ ನಿಖರ ಮಾಹಿತಿ ದೊರೆಯಲಿದೆ. ಇದರಿಂದ ಅದರ ಸಮರ್ಪಕ ಬಳಕೆಯ ಯೋಜನೆ ರೂಪಿಸಬಹುದು’ ಎಂದು ಹೇಳಿದರು.</p>.<p class="rtejustify">‘ಈಗ, 50 ವರ್ಷಗಳ ಹಿಂದಿನ ಸಮೀಕ್ಷೆ ಆಧರಿಸಿ ಖನಿಜ ಸಂಪತ್ತು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಆದರೆ, ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ಸಮೀಕ್ಷೆ ನಡೆಸುವ ಮೂಲಕ ಖನಿಜ ಸಂಪತ್ತು ಪತ್ತೆ ಹಚ್ಚಿದಾಗ ಪ್ರಸ್ತುತ ಸನ್ನಿವೇಶದಲ್ಲಿ ಕರ್ನಾಟಕ ಅತ್ಯಂತ ಶ್ರೀಮಂತ ರಾಜ್ಯ ಎನಿಸಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p class="rtejustify">‘ಖನಿಜ ಸಂಪತ್ತಿನ ಸದ್ಬಳಕೆ ಜೊತೆಗೆ ಉದ್ಯೋಗಗಳನ್ನು ಸೃಷ್ಟಿಸುವುದು ಕೂಡ ನನ್ನ ಆದ್ಯತೆಯಾಗಿದೆ’ ಎಂದು ತಿಳಿಸಿದರು.</p>.<p class="rtejustify">‘ಮರಳನ್ನು ಗ್ರೇಡ್ ಪ್ರಕಾರ ವಿಂಗಡಿಸಿ ಅಗತ್ಯತೆ ಆಧರಿಸಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಮಿತಿಗಳ ಮೂಲಕ ವಿತರಣೆಗೆ ಅನುಕೂಲ ಆಗುವಂತೆ ‘ಮರಳು ನಿಗಮ’ (ಸ್ಯಾಂಡ್ ಕಾರ್ಪೋರೇಷನ್) ಸ್ಥಾಪನೆ ಚಿಂತನೆ ಇದೆ. ಶೀಘ್ರವೇ ಕಾರ್ಯಕತಗೊಳಿಸಲು ಕ್ರಮ ವಹಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>