<p><strong>ಮುಗಳಖೋಡ (ಬೆಳಗಾವಿ ಜಿಲ್ಲೆ): </strong>‘ಪಟ್ಟಣದಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳು ಕಳಪೆ ಎಂದು ಕಂಡುಬಂದಲ್ಲಿ ಸಾರ್ವಜನಿಕರು ತಡೆ ನೀಡಬೇಕು. ಎಲ್ಲ ಕೆಲಸಗಳಿಗೂ ಅಡ್ಡಿಪಡಿಸಬಾರದು’ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಈಶ್ವರ ಉಳ್ಳಾಗಡ್ಡಿ ಸಲಹೆ ನೀಡಿದರು.</p>.<p>‘ಪುರಸಭೆ ವತಿಯಿಂದ ಕೈಗೊಂಡಿರುವ ಬಸ್ ನಿಲ್ದಾಣ ಸೇರಿದಂತೆ ವಿವಿಧ ಕಾಮಗಾರಿಗಳು ನಿಗದಿತ ಸಮಯಕ್ಕೆ ಪೂರ್ಣಗೊಂಡಿಲ್ಲ. ಗುಣಮಟ್ಟವೂ ಸರಿ ಇಲ್ಲ’ ಎಂಬ ಸಾರ್ವಜನಿಕರ ಆರೋಪದ ಹಿನ್ನೆಲೆಯಲ್ಲಿ ಗುರುವಾರ ಇಲ್ಲಿಗೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿದರು.</p>.<p>‘ಜನರ ಸಮಸ್ಯೆಗಳನ್ನು ಖುದ್ದಾಗಿ ಪರಿಶೀಲಿಸಿ ಸೂಕ್ತ ಪರಿಹಾರ ಒದಗಿಸಬೇಕು’ ಎಂದು ಸೂಚಿಸಿದರು.</p>.<p>ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಆಗ್ರಹಿಸಿ ಪಾದಯಾತ್ರೆ ನಡೆಸಿದ 15 ಮತ್ತು 16ನೇ ವಾರ್ಡ್ಗಳ ನಿವಾಸಿಗಳೊಂದಿಗೆ ಚರ್ಚಿಸಿದರು. ‘15 ದಿನಗಳಲ್ಲಿ ಸಮಸ್ಯೆ ಬಗೆಹರಿಸಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು’ ಎಂದು ಭರವಸೆ ನೀಡಿದರು.</p>.<p>‘ನಗರೋತ್ಥಾನ ಯೋಜನೆಯಲ್ಲಿ ಶಾಮಾನಂದ ಮಠದ ಬಳಿ ಶೌಚಾಲಯವನ್ನು ತ್ವರಿತವಾಗಿ ನಿರ್ಮಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.</p>.<p>‘ಚರಂಡಿ ನೀರು ಕೆರೆಗೆ ಸೇರದಂತೆ ಕ್ರಮ ವಹಿಸಬೇಕು’ ಎಂದು ಪುರಸಭೆ ಮುಖ್ಯಾಧಿಕಾರಿ ಜಿ.ಬಿ. ಡಂಬಳ ಅವರಿಗೆ ಸೂಚಿಸಿದರು.</p>.<p>ಎಇ ಎಂ.ಎಲ್. ಗಣಿ, ಎಇಇ ಪಿ.ಕೆ. ಸಿಂಧೂರೆ, ಆರ್.ಆರ್. ಚೌಗಲಾ, ರಾಜಶೇಖರ ಜಾಗನೂರ, ಮಹಾವೀರ ಕುರಣಿ, ರಾಮಣ್ಣ ಮುಧೋಳ, ಸುರೇಶ ಹೊಸಪೇಟಿ, ಹಣಮಂತ ಕುಲಿಗೋಡ ಲತಾ ಹುದ್ದಾರ, ಹಣಮಂತ ಕಲ್ಲೋಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಗಳಖೋಡ (ಬೆಳಗಾವಿ ಜಿಲ್ಲೆ): </strong>‘ಪಟ್ಟಣದಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳು ಕಳಪೆ ಎಂದು ಕಂಡುಬಂದಲ್ಲಿ ಸಾರ್ವಜನಿಕರು ತಡೆ ನೀಡಬೇಕು. ಎಲ್ಲ ಕೆಲಸಗಳಿಗೂ ಅಡ್ಡಿಪಡಿಸಬಾರದು’ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಈಶ್ವರ ಉಳ್ಳಾಗಡ್ಡಿ ಸಲಹೆ ನೀಡಿದರು.</p>.<p>‘ಪುರಸಭೆ ವತಿಯಿಂದ ಕೈಗೊಂಡಿರುವ ಬಸ್ ನಿಲ್ದಾಣ ಸೇರಿದಂತೆ ವಿವಿಧ ಕಾಮಗಾರಿಗಳು ನಿಗದಿತ ಸಮಯಕ್ಕೆ ಪೂರ್ಣಗೊಂಡಿಲ್ಲ. ಗುಣಮಟ್ಟವೂ ಸರಿ ಇಲ್ಲ’ ಎಂಬ ಸಾರ್ವಜನಿಕರ ಆರೋಪದ ಹಿನ್ನೆಲೆಯಲ್ಲಿ ಗುರುವಾರ ಇಲ್ಲಿಗೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿದರು.</p>.<p>‘ಜನರ ಸಮಸ್ಯೆಗಳನ್ನು ಖುದ್ದಾಗಿ ಪರಿಶೀಲಿಸಿ ಸೂಕ್ತ ಪರಿಹಾರ ಒದಗಿಸಬೇಕು’ ಎಂದು ಸೂಚಿಸಿದರು.</p>.<p>ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಆಗ್ರಹಿಸಿ ಪಾದಯಾತ್ರೆ ನಡೆಸಿದ 15 ಮತ್ತು 16ನೇ ವಾರ್ಡ್ಗಳ ನಿವಾಸಿಗಳೊಂದಿಗೆ ಚರ್ಚಿಸಿದರು. ‘15 ದಿನಗಳಲ್ಲಿ ಸಮಸ್ಯೆ ಬಗೆಹರಿಸಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು’ ಎಂದು ಭರವಸೆ ನೀಡಿದರು.</p>.<p>‘ನಗರೋತ್ಥಾನ ಯೋಜನೆಯಲ್ಲಿ ಶಾಮಾನಂದ ಮಠದ ಬಳಿ ಶೌಚಾಲಯವನ್ನು ತ್ವರಿತವಾಗಿ ನಿರ್ಮಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.</p>.<p>‘ಚರಂಡಿ ನೀರು ಕೆರೆಗೆ ಸೇರದಂತೆ ಕ್ರಮ ವಹಿಸಬೇಕು’ ಎಂದು ಪುರಸಭೆ ಮುಖ್ಯಾಧಿಕಾರಿ ಜಿ.ಬಿ. ಡಂಬಳ ಅವರಿಗೆ ಸೂಚಿಸಿದರು.</p>.<p>ಎಇ ಎಂ.ಎಲ್. ಗಣಿ, ಎಇಇ ಪಿ.ಕೆ. ಸಿಂಧೂರೆ, ಆರ್.ಆರ್. ಚೌಗಲಾ, ರಾಜಶೇಖರ ಜಾಗನೂರ, ಮಹಾವೀರ ಕುರಣಿ, ರಾಮಣ್ಣ ಮುಧೋಳ, ಸುರೇಶ ಹೊಸಪೇಟಿ, ಹಣಮಂತ ಕುಲಿಗೋಡ ಲತಾ ಹುದ್ದಾರ, ಹಣಮಂತ ಕಲ್ಲೋಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>