ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ತಪಾಸಣೆಗೆ ಒಳಗಾಗದವರಿಗೆ ಗುಂಡಿಕ್ಕುವುದು ಪರಿಹಾರವಲ್ಲ. ಪರಿಹಾರವೇನು ಎನ್ನುವುದನ್ನು ಕಂಡುಕೊಳ್ಳಬೇಕು. ಮಾಹಿತಿ ನೀಡದವರ ವಿರುದ್ಧ ಕ್ರಮಕ್ಕೆ ಅವಕಾಶವಿದೆ. ಮೊದಲು ಸೋಂಕು ಹರಡುವುದನ್ನು ನಿಯಂತ್ರಿಸಿ, ಬಳಿಕ ಕ್ರಮ ಕೈಗೊಳ್ಳಬೇಕು. ಒಂದು ಸಮುದಾಯದಿಂದ ಕೊರೊನಾ ಬಂದಿದ್ದಲ್ಲ. ಸೋಂಕಿತರಲ್ಲಿ ಶೇ 10ರಷ್ಟು ಮಂದಿ ಒಂದು ಸಮುದಾಯದವರು ಇರಬಹುದು, ಉಳಿದವರಾರು? ಕೊರೊನಾ ವಿದೇಶದಿಂದ ಬಂದಿದೆ. ಒಂದೇ ಸಮುದಾಯ ಟಾರ್ಗೆಟ್ ಮಾಡಲಾಗದು’ ಎಂದು ಪ್ರತಿಕ್ರಿಯಿಸಿದರು.