ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಾಬ್‌ನಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಬಿಜೆಪಿ ಆಗ್ರಹ, ಜಿಲ್ಲಾಧಿಕಾರಿಗೆ ಮನವಿ

Last Updated 7 ಜನವರಿ 2022, 13:32 IST
ಅಕ್ಷರ ಗಾತ್ರ

ಬೆಳಗಾವಿ: ‘ಪ್ರಧಾನಿ ನರೇಂದ್ರ ಮೋದಿ ಪ್ರವಾಸದ ಸಂದರ್ಭದಲ್ಲಿ ಭದ್ರತಾ ಲೋಪಕ್ಕೆ ಕಾರಣವಾಗಿರುವ ಕಾಂಗ್ರೆಸ್ ನೇತೃತ್ವದ ಪಂಜಾಬ್‌ ಸರ್ಕಾರವನ್ನು ಕಿತ್ತೊಗೆದು ರಾಷ್ಟ್ರಪತಿ ಅಡಳಿತ ಜಾರಿಗೆ ತರಬೇಕು’ ಎಂದು ಆಗ್ರಹಿಸಿ ಬಿಜೆಪಿ ಗ್ರಾಮಾಂತರ, ಮಹಾನಗರ ಜಿಲ್ಲೆ ಹಾಗೂ ಮಂಡಳದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸುಭಾಷ ಪಾಟೀಲ ಮಾತನಾಡಿ, ‘ದೇಶದ ಸಮಸ್ತ ಜನರ ಪ್ರತೀಕವಾಗಿರುವ ಪ್ರಧಾನಿಗೆ ಕಾಂಗ್ರೆಸ್ ಅಡಳಿತವಿರುವ ಪಂಜಾಬ್‌ ಸರ್ಕಾರ ಭದ್ರತೆ ಒದಗಿಸುವಲ್ಲಿ ವಿಫಲವಾಗಿರುವುದು ಖಂಡನೀಯ. ಉಗ್ರ ಸಂಘಟನೆಗಳ ಹಾವಳಿಯಿಂದ ತುತ್ತಾದ ಪ್ರದೇಶಗಳಲ್ಲೂ ಪ್ರಧಾನಿ ಅವರ ರಕ್ಷಣಾ ವ್ಯವಸ್ಥೆಗೆ ತೊಂದರೆ ಆಗಿರಲಿಲ್ಲ. ಆದರೆ, ಪಂಜಾಬ್‌ನಲ್ಲಿ ಆಗಿರುವುದು ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆಯಾಗಿದೆ’ ಎಂದು ದೂರಿದರು.

ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಂದೀಪ ದೇಶಪಾಂಡೆ, ಖಜಾಂಚಿ ಮಲ್ಲಿಕಾರ್ಜುನ ಮಾದಮ್ಮನವರ, ‘ದೇಶದಲ್ಲಿ ಹಿಂದೆಂದೂ ನಡೆಯಲಾರದ ಘಟನೆ ಪಂಜಾಬ್‌ನಲ್ಲಿ ಆಗಿದೆ. ಘನತೆಗೆ ಕಳಂಕ ತರಲಾಗಿದೆ. ದೇಶದ ಐಕ್ಯತೆ ಮತ್ತು ಸಮಗ್ರತೆಗೆ ಧಕ್ಕೆ ಮಾಡಲು ಅಲ್ಲಿನ ಸರ್ಕಾರ ಹೊರಟಿದ್ದು, ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ನಡೆದುಕೊಂಡಿದೆ’ ಎಂದು ಆರೋಪಿಸಿದರು.

ಮುಖಂಡ ಶಶಿಕಾಂತ ನಾಯಿಕ, ಮಹಿಳಾ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷೆ ರೇಖಾ ಚಿನ್ನಾಕಟ್ಟಿ, ಮಹಾನಗರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದಾದಾಗೌಡ ಬಿರಾದಾರ, ಗುರು ಮೆಟಗುಡ್, ಯುವರಾಜ ಜಾಧವ, ಧನಂಜಯ ಜಾಧವ, ರತ್ನಾ ಗೋಧಿ, ರಾಜೇಂದ್ರ ಗೌಡಪ್ಪಗೋಳ, ಬಸವರಾಜ ಪರವನ್ನವರ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT