<p><strong>ಬೆಳಗಾವಿ</strong>: ‘ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಬ್ಸಿಡಿ ಸೌಕರ್ಯದ ನೆರವಿನಿಂದ ಸ್ಥಳೀಯವಾಗಿ ಕಿರು ಆಹಾರ ಸಂಸ್ಕರಣಾ ಉದ್ಯಮ ಸ್ಥಾಪಿಸಿ, ಆರ್ಥಿಕವಾಗಿ ಸಬಲರಾಗಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕರೆ ನೀಡಿದರು.</p><p>ಇಲ್ಲಿನ ಶಿವಬಸವ ನಗರದ ಕೆಪಿಟಿಸಿಎಲ್ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ಯಮಗಳ ನಿಯಮಬದ್ಧಗೊಳಿಸುವಿಕೆ(ಪಿಎಂಎಫ್ಎಂಇ) ಯೋಜನೆ ಕುರಿತು ಜಿಲ್ಲಾಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p><p>‘ಕಿರು ಆಹಾರ ಸಂಸ್ಕರಣಾ ಉದ್ಯಮಗಳ ಸ್ಥಾಪನೆಗಾಗಿ ಕೇಂದ್ರ ಸರ್ಕಾರದಿಂದ ₹9 ಲಕ್ಷ, ರಾಜ್ಯದಿಂದ ₹5 ಲಕ್ಷ ಸೇರಿದಂತೆ ₹15 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತಿದೆ. ಇದರೊಂದಿಗೆ ತಾವೂ ಬ್ಯಾಂಕ್ಗಳಿಂದ ಒಂದಿಷ್ಟು ಸಾಲ ಸೌಲಭ್ಯ ಪಡೆದು ಉದ್ಯಮಗಳನ್ನು ಸ್ಥಾಪಿಸಬೇಕು. ಜೀವನದಲ್ಲಿ ತಾವು ಕಲಿತಿರುವ ಕೌಶಲ ಪ್ರಯೋಗ ರೂಪಕ್ಕಿಳಿಸಲು ಇದು ಒಳ್ಳೆಯ ಅವಕಾಶ’ ಎಂದರು.</p><p>‘ಇಂದು ದೊಡ್ಡ ಉದ್ಯಮಿಗಳಾದವರೆಲ್ಲ ಆರಂಭದಲ್ಲಿ ಕಿರು ಉದ್ಯಮಗಳನ್ನು ಮಾಡುತ್ತ ಬೆಳೆದವರೇ. ಅವರನ್ನು ನೀವು ಪ್ರೇರಣೆಯಾಗಿ ಇಟ್ಟುಕೊಂಡು ನೀವೂ ಮುನ್ನಡೆಯಬೇಕು. ಮನೆಯಲ್ಲೇ ನಿಮ್ಮದೇ ಉತ್ಪನ್ನ ಸಿದ್ಧಪಡಿಸಿ ಬ್ರ್ಯಾಂಡಿಂಗ್ ಮಾಡಿ, ಮಾರುಕಟ್ಟೆಗೆ ತರಬೇಕು. ಈ ಯೋಜನೆಯಡಿ ಹಿಟ್ಟಿನ ಗಿರಣಿ ತೆರೆಯಬಹುದು. ಬೇಕರಿ ಉತ್ಪನ್ನಗಳು, ಮಸಾಲೆ ಪದಾರ್ಥಗಳು, ಚಪ್ಪಾತಿ ಸಿದ್ಧಪಡಿಸಬಹುದು. ಜೇನು ಸಂಸ್ಕರಣೆ ಮಾಡಬಹುದು’ ಎಂದು ತಿಳಿಸಿದರು.</p><p>‘ಆಹಾರ ಉದ್ಯಮದಲ್ಲಿ ನಾವು ಅಗ್ರಸ್ಥಾನಕ್ಕೆ ಏರುವ ಅವಶ್ಯಕತೆ ಇದೆ. ಯಾರು ಗುಣಮಟ್ಟಕ್ಕೆ ಆದ್ಯತೆ ನೀಡುತ್ತಾರೆಯೋ ಮತ್ತು ಗ್ರಾಹಕರ ವಿಶ್ವಾಸ ಗಳಿಸುತ್ತಾರೆಯೋ, ಅವರು ಉದ್ಯಮ ರಂಗದಲ್ಲಿ ಬೆಳೆಯಲು ಸಾಧ್ಯವಿದೆ. ಜಿಲ್ಲೆಯಲ್ಲಿ ಈ ಯೋಜನೆಯಡಿ ವಾರ್ಷಿಕ 1,500 ಜನರಿಗೆ ಕಿರು ಉದ್ಯಮ ಸ್ಥಾಪಿಸಲು ಅವಕಾಶವಿದೆ’ ಎಂದರು.</p><p>ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ(ಕೆಪೆಕ್) ವ್ಯವಸ್ಥಾಪಕ ನಿರ್ದೇಶಕ ಸಿ.ಎನ್.ಶಿವಪ್ರಕಾಶ ಪ್ರಾಸ್ತಾವಿಕವಾಗಿ ಮಾತನಾಡಿದರು.</p><p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಉಪಸ್ಥಿತರಿದ್ದರು. ಕೃಷಿ ಇಲಾಖೆ ಜಂಟಿನಿರ್ದೇಶಕ ಎಚ್.ಡಿ.ಕೋಳೇಕರ ಸ್ವಾಗತಿಸಿದರು. </p><p>ಇದೇವೇಳೆ, ಪಿಎಂಎಫ್ಎಂಇ ಯೋಜನೆಯಡಿ ಸಿದ್ಧಪಡಿಸಿದ ಉತ್ಪನ್ನಗಳನ್ನು ಪ್ರದರ್ಶಿಸಲಾಯಿತು. ಬ್ಯಾಂಕ್ಗಳಲ್ಲಿ ಲಭ್ಯವಿರುವ ಸಾಲ ಸೌಲಭ್ಯ, ದಾಖಲೆಗಳ ಕುರಿತು ಮಾಹಿತಿ ನೀಡಲಾಯಿತು.</p>.ನಮ್ಮಲ್ಲಿ ಯಾವುದೇ ಜಗಳವಿಲ್ಲ, ನಾವೆಲ್ಲ ಒಗ್ಗಟ್ಟಾಗಿದ್ದೇವೆ: ಸಂಸದ ಸಾಗರ್ ಖಂಡ್ರೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಬ್ಸಿಡಿ ಸೌಕರ್ಯದ ನೆರವಿನಿಂದ ಸ್ಥಳೀಯವಾಗಿ ಕಿರು ಆಹಾರ ಸಂಸ್ಕರಣಾ ಉದ್ಯಮ ಸ್ಥಾಪಿಸಿ, ಆರ್ಥಿಕವಾಗಿ ಸಬಲರಾಗಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕರೆ ನೀಡಿದರು.</p><p>ಇಲ್ಲಿನ ಶಿವಬಸವ ನಗರದ ಕೆಪಿಟಿಸಿಎಲ್ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ಯಮಗಳ ನಿಯಮಬದ್ಧಗೊಳಿಸುವಿಕೆ(ಪಿಎಂಎಫ್ಎಂಇ) ಯೋಜನೆ ಕುರಿತು ಜಿಲ್ಲಾಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p><p>‘ಕಿರು ಆಹಾರ ಸಂಸ್ಕರಣಾ ಉದ್ಯಮಗಳ ಸ್ಥಾಪನೆಗಾಗಿ ಕೇಂದ್ರ ಸರ್ಕಾರದಿಂದ ₹9 ಲಕ್ಷ, ರಾಜ್ಯದಿಂದ ₹5 ಲಕ್ಷ ಸೇರಿದಂತೆ ₹15 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತಿದೆ. ಇದರೊಂದಿಗೆ ತಾವೂ ಬ್ಯಾಂಕ್ಗಳಿಂದ ಒಂದಿಷ್ಟು ಸಾಲ ಸೌಲಭ್ಯ ಪಡೆದು ಉದ್ಯಮಗಳನ್ನು ಸ್ಥಾಪಿಸಬೇಕು. ಜೀವನದಲ್ಲಿ ತಾವು ಕಲಿತಿರುವ ಕೌಶಲ ಪ್ರಯೋಗ ರೂಪಕ್ಕಿಳಿಸಲು ಇದು ಒಳ್ಳೆಯ ಅವಕಾಶ’ ಎಂದರು.</p><p>‘ಇಂದು ದೊಡ್ಡ ಉದ್ಯಮಿಗಳಾದವರೆಲ್ಲ ಆರಂಭದಲ್ಲಿ ಕಿರು ಉದ್ಯಮಗಳನ್ನು ಮಾಡುತ್ತ ಬೆಳೆದವರೇ. ಅವರನ್ನು ನೀವು ಪ್ರೇರಣೆಯಾಗಿ ಇಟ್ಟುಕೊಂಡು ನೀವೂ ಮುನ್ನಡೆಯಬೇಕು. ಮನೆಯಲ್ಲೇ ನಿಮ್ಮದೇ ಉತ್ಪನ್ನ ಸಿದ್ಧಪಡಿಸಿ ಬ್ರ್ಯಾಂಡಿಂಗ್ ಮಾಡಿ, ಮಾರುಕಟ್ಟೆಗೆ ತರಬೇಕು. ಈ ಯೋಜನೆಯಡಿ ಹಿಟ್ಟಿನ ಗಿರಣಿ ತೆರೆಯಬಹುದು. ಬೇಕರಿ ಉತ್ಪನ್ನಗಳು, ಮಸಾಲೆ ಪದಾರ್ಥಗಳು, ಚಪ್ಪಾತಿ ಸಿದ್ಧಪಡಿಸಬಹುದು. ಜೇನು ಸಂಸ್ಕರಣೆ ಮಾಡಬಹುದು’ ಎಂದು ತಿಳಿಸಿದರು.</p><p>‘ಆಹಾರ ಉದ್ಯಮದಲ್ಲಿ ನಾವು ಅಗ್ರಸ್ಥಾನಕ್ಕೆ ಏರುವ ಅವಶ್ಯಕತೆ ಇದೆ. ಯಾರು ಗುಣಮಟ್ಟಕ್ಕೆ ಆದ್ಯತೆ ನೀಡುತ್ತಾರೆಯೋ ಮತ್ತು ಗ್ರಾಹಕರ ವಿಶ್ವಾಸ ಗಳಿಸುತ್ತಾರೆಯೋ, ಅವರು ಉದ್ಯಮ ರಂಗದಲ್ಲಿ ಬೆಳೆಯಲು ಸಾಧ್ಯವಿದೆ. ಜಿಲ್ಲೆಯಲ್ಲಿ ಈ ಯೋಜನೆಯಡಿ ವಾರ್ಷಿಕ 1,500 ಜನರಿಗೆ ಕಿರು ಉದ್ಯಮ ಸ್ಥಾಪಿಸಲು ಅವಕಾಶವಿದೆ’ ಎಂದರು.</p><p>ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ(ಕೆಪೆಕ್) ವ್ಯವಸ್ಥಾಪಕ ನಿರ್ದೇಶಕ ಸಿ.ಎನ್.ಶಿವಪ್ರಕಾಶ ಪ್ರಾಸ್ತಾವಿಕವಾಗಿ ಮಾತನಾಡಿದರು.</p><p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಉಪಸ್ಥಿತರಿದ್ದರು. ಕೃಷಿ ಇಲಾಖೆ ಜಂಟಿನಿರ್ದೇಶಕ ಎಚ್.ಡಿ.ಕೋಳೇಕರ ಸ್ವಾಗತಿಸಿದರು. </p><p>ಇದೇವೇಳೆ, ಪಿಎಂಎಫ್ಎಂಇ ಯೋಜನೆಯಡಿ ಸಿದ್ಧಪಡಿಸಿದ ಉತ್ಪನ್ನಗಳನ್ನು ಪ್ರದರ್ಶಿಸಲಾಯಿತು. ಬ್ಯಾಂಕ್ಗಳಲ್ಲಿ ಲಭ್ಯವಿರುವ ಸಾಲ ಸೌಲಭ್ಯ, ದಾಖಲೆಗಳ ಕುರಿತು ಮಾಹಿತಿ ನೀಡಲಾಯಿತು.</p>.ನಮ್ಮಲ್ಲಿ ಯಾವುದೇ ಜಗಳವಿಲ್ಲ, ನಾವೆಲ್ಲ ಒಗ್ಗಟ್ಟಾಗಿದ್ದೇವೆ: ಸಂಸದ ಸಾಗರ್ ಖಂಡ್ರೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>