<p><strong>ಸವದತ್ತಿ</strong>: ಪೋಕ್ಸೋ, ಬಾಲ್ಯ ವಿವಾಹ ಮತ್ತು ಬಾಲ ಕಾರ್ಮಿಕ ಪದ್ದತಿ ನಿಷೇಧ ಕಾಯ್ದೆಗಳ ಕುರಿತು ಅರಿವು ಇಲ್ಲದೇ ಅಪ್ರಾಪ್ತ ಮಕ್ಕಳು ದೌರ್ಜನ್ಯಕ್ಕೆ ಒಳಗಾಗುತ್ತಿರುವುದು ವಿಷಾದನೀಯ. ಕಾರಣ ಕಾನೂನು ಪ್ರಾಧಿಕಾರ ಹಾಗೂ ತಾಲ್ಲೂಕು ಆಡಳಿತದ ಸಹಯೋಗದಲ್ಲಿ ನೂರು ದಿನಗಳ ಜಾಗೃತಿ ಅಭಿಯಾನ ಆರಂಭಿಸಿ ಮಕ್ಕಳಿಗೆ ಕಾನೂನು ಅರಿವು ಮೂಡಿಸಲಾಗುವುದು ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಸಿದ್ರಾಮ್ ಟಿ. ಹೇಳಿದರು.</p>.<p>ತಾಲೂಕಿನ ಕರೀಕಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ಜರುಗಿದ ಪೋಕ್ಸೋ, ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕ ನಿಷೇಧ ಕಾಯ್ದೆಗಳ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಲೈಂಗಿಕ ದೌರ್ಜನ್ಯದಲ್ಲಿ ಹೆಣ್ಣು ಮಕ್ಕಳು ಮಾತ್ರವಲ್ಲ ಗಂಡು ಮಕ್ಕಳು ಬಲಿಯಾಗುತ್ತಿದ್ದಾರೆ. ಈ ಕಾಯ್ದೆಯಲ್ಲಿ ಗಂಡು ಹೆಣ್ಣೆಂಬ ಬೇಧವಿಲ್ಲದೇ ದೌರ್ಜನ್ಯಕ್ಕೆ ಒಳಗಾದ ಅಪ್ರಾಪ್ತ ಮಕ್ಕಳು ರಕ್ಷಣೆ ಪಡೆಯಬಹುದಾಗಿದೆ ಎಂದರು.</p>.<p>ಬಿಇಓ ಎ.ಎ.ಖಾಜಿ ಮಾತನಾಡಿದರು. ಈ ವೇಳೆ ಅಶೋಕ ಉಪ್ಪಾರ, ಶಿಕ್ಷಕರ ಸಂಘದ ಅಧ್ಯಕ್ಷ ಕಿರಣ ಕುರಿ, ಚೇತನಾ ಹಳ್ಳಿ, ಶರೀಫಸಾಬ ನದಾಫ, ಎಂ.ಎಸ್. ಹುಬ್ಬಳ್ಳಿ, ಬಸವರಾಜ ಕಬ್ಬೂರ, ಎಚ್.ಎಮ್. ಮುನವಳ್ಳಿ ಹಾಗೂ ಪಾಲಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸವದತ್ತಿ</strong>: ಪೋಕ್ಸೋ, ಬಾಲ್ಯ ವಿವಾಹ ಮತ್ತು ಬಾಲ ಕಾರ್ಮಿಕ ಪದ್ದತಿ ನಿಷೇಧ ಕಾಯ್ದೆಗಳ ಕುರಿತು ಅರಿವು ಇಲ್ಲದೇ ಅಪ್ರಾಪ್ತ ಮಕ್ಕಳು ದೌರ್ಜನ್ಯಕ್ಕೆ ಒಳಗಾಗುತ್ತಿರುವುದು ವಿಷಾದನೀಯ. ಕಾರಣ ಕಾನೂನು ಪ್ರಾಧಿಕಾರ ಹಾಗೂ ತಾಲ್ಲೂಕು ಆಡಳಿತದ ಸಹಯೋಗದಲ್ಲಿ ನೂರು ದಿನಗಳ ಜಾಗೃತಿ ಅಭಿಯಾನ ಆರಂಭಿಸಿ ಮಕ್ಕಳಿಗೆ ಕಾನೂನು ಅರಿವು ಮೂಡಿಸಲಾಗುವುದು ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಸಿದ್ರಾಮ್ ಟಿ. ಹೇಳಿದರು.</p>.<p>ತಾಲೂಕಿನ ಕರೀಕಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ಜರುಗಿದ ಪೋಕ್ಸೋ, ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕ ನಿಷೇಧ ಕಾಯ್ದೆಗಳ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಲೈಂಗಿಕ ದೌರ್ಜನ್ಯದಲ್ಲಿ ಹೆಣ್ಣು ಮಕ್ಕಳು ಮಾತ್ರವಲ್ಲ ಗಂಡು ಮಕ್ಕಳು ಬಲಿಯಾಗುತ್ತಿದ್ದಾರೆ. ಈ ಕಾಯ್ದೆಯಲ್ಲಿ ಗಂಡು ಹೆಣ್ಣೆಂಬ ಬೇಧವಿಲ್ಲದೇ ದೌರ್ಜನ್ಯಕ್ಕೆ ಒಳಗಾದ ಅಪ್ರಾಪ್ತ ಮಕ್ಕಳು ರಕ್ಷಣೆ ಪಡೆಯಬಹುದಾಗಿದೆ ಎಂದರು.</p>.<p>ಬಿಇಓ ಎ.ಎ.ಖಾಜಿ ಮಾತನಾಡಿದರು. ಈ ವೇಳೆ ಅಶೋಕ ಉಪ್ಪಾರ, ಶಿಕ್ಷಕರ ಸಂಘದ ಅಧ್ಯಕ್ಷ ಕಿರಣ ಕುರಿ, ಚೇತನಾ ಹಳ್ಳಿ, ಶರೀಫಸಾಬ ನದಾಫ, ಎಂ.ಎಸ್. ಹುಬ್ಬಳ್ಳಿ, ಬಸವರಾಜ ಕಬ್ಬೂರ, ಎಚ್.ಎಮ್. ಮುನವಳ್ಳಿ ಹಾಗೂ ಪಾಲಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>