ಬೆಳಗಾವಿ: ಎರಡು ಎಕರೆ ಜಮೀನನ್ನು ತಮ್ಮ ಹೆಸರಿಗೆ ಮಾಡಿಕೊಳ್ಳುವ ಉದ್ದೇಶದಿಂದ ಮಹಿಳೆಯೊಬ್ಬರು, ಪತಿಗೆ ಉಪ್ಪಿಟ್ಟಿನಲ್ಲಿ ವಿಷ ಹಾಕಿ ಕೊಲೆ ಮಾಡಲು ಯತ್ನಿಸಿದ ಪ್ರಕರಣವನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ವಿಷಪೂರಿತ ಉಪ್ಪಿಟ್ಟು ತಿಂದ, ಸವದತ್ತಿ ತಾಲ್ಲೂಕಿನ ಗೋರಾಬಾಳ ಗ್ರಾಮದ ನಿಂಗಪ್ಪ ಫಕೀರಪ್ಪ ಹಮಾನಿ (35) ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರ ಪತ್ನಿ ಸಾವಕ್ಕ (32) ಹಾಗೂ ಇವರ ಸಹೋದರ ಫಕೀರಪ್ಪ ಲಕ್ಷ್ಮಣ ಸಿಂಧೋಗಿ (30) ಆರೋಪಿಗಳು.