‘ಅವರು ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿ ಸಾರ್ವಜನಿಕ ನೆಮ್ಮದಿ ಮತ್ತು ಶಾಂತಿ ಸುವ್ಯವಸ್ಥೆ ಭಂಗ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಹಾವೇರಿಗೆ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ. ಅವರ ಮೇಲೆ 2011ರಿಂದ ಇಲ್ಲಿವರೆಗೆ 11 ಪ್ರಕರಣಗಳು ದಾಖಲಾಗಿ, ಎಲ್ಲ ನ್ಯಾಯಾಲಯಗಳಲ್ಲೂ ಶಿಕ್ಷೆಯಾಗಿದ್ದರೂ ಜೂಜಾಟ ಆಡಿಸುವುದನ್ನು ಮುಂದುವರಿಸಿದ್ದರು. ಹೀಗಾಗಿ, ಕಠಿಣ ಕ್ರಮ ಜರುಗಿಸಲಾಗಿದೆ’ ಎಂದು ಡಿಸಿಪಿ ತಿಳಿಸಿದ್ದಾರೆ.