ಇಲ್ಲಿನ ಪೊಲೀಸ್ ಕವಾಯತು ಮೈದಾನದಲ್ಲಿ ನಗರ ಪೊಲೀಸ್ ಕಮಿಷನರೇಟ್ ಹಾಗೂ ಜಿಲ್ಲಾ ಪೊಲೀಸ್ ಮಂಗಳವಾರ ಆಯೋಜಿಸಿದ್ದ ರಾಜ್ಯ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಬೇರೆ ಇಲಾಖೆಗಳಿಗೆ ಹೋಲಿಸಿದರೆ, ಪೊಲೀಸ್ ಇಲಾಖೆ ಉತ್ತಮ. ಹಾಗಾಗಿ ತಮ್ಮ ಕೆಲಸದ ಬಗ್ಗೆ ಗೌರವ ಇರಬೇಕು. ಆರಕ್ಷಕರು ಇರದಿದ್ದರೆ, ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತದೆ. ಅಶಾಂತಿ ಉಂಟಾಗುತ್ತದೆ. ಹಾಗಾಗಿ ಜನರೊಂದಿಗೆ ಸೌಜನ್ಯದಿಂದ ವರ್ತಿಸಿ, ಆರೋಗ್ಯಕರ ಸಮಾಜ ಕಟ್ಟಲು ಕೈಜೋಡಿಸಬೇಕು’ ಎಂದು ಕರೆ ನೀಡಿದರು.