<p><strong>ಬೆಳಗಾವಿ</strong>:ನಗರದ ವಿವಿಧೆಡೆ ಅಪರಾಧ ಚಟುವಟಿಕೆಗಳಿಗೆ ಹೊಂಚು ಹಾಕಿದ್ದ 26 ರೌಡಿಗಳ ಮನೆಗಳ ಮೇಲೆ ಬುಧವಾರ ಬೆಳ್ಳಂಬೆಳಿಗ್ಗೆ ದಾಳಿ ಮಾಡಿದ ಪೊಲೀಸರು ಮೂವರನ್ನು ವಶಕ್ಕೆ ಪಡೆದು, ಹಲವು ಮಾರಕಾಸ್ತ್ರ ಹಾಗೂ ದರೋಡೆಗೆ ಬಳಸುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಡಿಸಿಪಿ ರವೀಂದ್ರ ಗಡಾದಿ ನೇತೃತ್ವದ150ಕ್ಕೂ ಹೆಚ್ಚು ಪೊಲೀಸರ ತಂಡ ಈ ಕಾರ್ಯಾಚರಣೆ ನಡೆಸಿತು.</p>.<p>ನಗರದ ವಿವಿಧ ಕಡೆಗಳಲ್ಲಿ ನಿರಾಳವಾಗಿ ಓಡಾಡುತ್ತಿದ್ದ ರೌಡಿಗಳಿಗೆ ಬಿಸಿ ಮುಟ್ಟಿಸಲು, ಅವರ ಮನೆಗಳ ಮೇಲೆ ದಾಳಿ ನಡೆಸಿದ ಪೊಲೀಸರಿಗೆ ತಲವಾರ, ಚಾಕು, ಜಂಬೆ ಸೇರಿದಂತೆ ಇತರೆ ಮಾರಕಾಸ್ತ್ರಗಳು ಸಿಕ್ಕಿವೆ.</p>.<p>ರುಕ್ಮಿಣಿ ನಗರದ ಶ್ರೀಧರ ಸತ್ಯಪ್ಪ ತಲವಾರ (29), ಮಧ್ವರೋಡಿನ ವಿನಯ ಶಂಕರ ಪ್ರಧಾನ (45) ಹಾಗೂ ಖಂಜರ ಗಲ್ಲಿಯ ಅಲ್ತಾಫ ಸುಬೇದಾರ (36) ಅವರನ್ನು ಮಾರಕಾಸ್ತ್ರ ಸಂಗ್ರಹಿಸಿದ ಆರೋಪದಡೆ ವಶಕ್ಕೆ ಪಡೆಯಲಾಗಿದೆ.<br /><br />ಎಲ್ಲ 26 ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದಲ್ಲಿ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ದಾಳಿ ವಿಷಯ ತಿಳಿದು ಹಲವರು ಮನೆಯಿಂದ ಪರಾರಿಯಾಗಿ ತಲೆಮರೆಸಿಕೊಂಡರು.<br /><br />ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಈ ದಾಳಿ ನಡೆಸಲಾಗಿದೆ. ಸಮಾಜದಲ್ಲಿ ಶಾಂತಿ ಭಂಗ ಮಾಡುವವರ ಮೇಲೆ ನಿಗಾ ಇಡಲಾಗುತ್ತಿದೆ ಎಂದು ಡಿಸಿಪಿ ರವೀಂದ್ರ ಗಡಾದಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>:ನಗರದ ವಿವಿಧೆಡೆ ಅಪರಾಧ ಚಟುವಟಿಕೆಗಳಿಗೆ ಹೊಂಚು ಹಾಕಿದ್ದ 26 ರೌಡಿಗಳ ಮನೆಗಳ ಮೇಲೆ ಬುಧವಾರ ಬೆಳ್ಳಂಬೆಳಿಗ್ಗೆ ದಾಳಿ ಮಾಡಿದ ಪೊಲೀಸರು ಮೂವರನ್ನು ವಶಕ್ಕೆ ಪಡೆದು, ಹಲವು ಮಾರಕಾಸ್ತ್ರ ಹಾಗೂ ದರೋಡೆಗೆ ಬಳಸುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಡಿಸಿಪಿ ರವೀಂದ್ರ ಗಡಾದಿ ನೇತೃತ್ವದ150ಕ್ಕೂ ಹೆಚ್ಚು ಪೊಲೀಸರ ತಂಡ ಈ ಕಾರ್ಯಾಚರಣೆ ನಡೆಸಿತು.</p>.<p>ನಗರದ ವಿವಿಧ ಕಡೆಗಳಲ್ಲಿ ನಿರಾಳವಾಗಿ ಓಡಾಡುತ್ತಿದ್ದ ರೌಡಿಗಳಿಗೆ ಬಿಸಿ ಮುಟ್ಟಿಸಲು, ಅವರ ಮನೆಗಳ ಮೇಲೆ ದಾಳಿ ನಡೆಸಿದ ಪೊಲೀಸರಿಗೆ ತಲವಾರ, ಚಾಕು, ಜಂಬೆ ಸೇರಿದಂತೆ ಇತರೆ ಮಾರಕಾಸ್ತ್ರಗಳು ಸಿಕ್ಕಿವೆ.</p>.<p>ರುಕ್ಮಿಣಿ ನಗರದ ಶ್ರೀಧರ ಸತ್ಯಪ್ಪ ತಲವಾರ (29), ಮಧ್ವರೋಡಿನ ವಿನಯ ಶಂಕರ ಪ್ರಧಾನ (45) ಹಾಗೂ ಖಂಜರ ಗಲ್ಲಿಯ ಅಲ್ತಾಫ ಸುಬೇದಾರ (36) ಅವರನ್ನು ಮಾರಕಾಸ್ತ್ರ ಸಂಗ್ರಹಿಸಿದ ಆರೋಪದಡೆ ವಶಕ್ಕೆ ಪಡೆಯಲಾಗಿದೆ.<br /><br />ಎಲ್ಲ 26 ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದಲ್ಲಿ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ದಾಳಿ ವಿಷಯ ತಿಳಿದು ಹಲವರು ಮನೆಯಿಂದ ಪರಾರಿಯಾಗಿ ತಲೆಮರೆಸಿಕೊಂಡರು.<br /><br />ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಈ ದಾಳಿ ನಡೆಸಲಾಗಿದೆ. ಸಮಾಜದಲ್ಲಿ ಶಾಂತಿ ಭಂಗ ಮಾಡುವವರ ಮೇಲೆ ನಿಗಾ ಇಡಲಾಗುತ್ತಿದೆ ಎಂದು ಡಿಸಿಪಿ ರವೀಂದ್ರ ಗಡಾದಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>