ಬೆಳಗಾವಿ: ಮಹಾರಾಷ್ಟ್ರ ಏಕೀಕರಣ ಸಮಿತಿಯು (ಎಂಇಎಸ್)ನಗರದಲ್ಲಿ ಸೋಮವಾರ ಆಯೋಜಿಸಿದ್ದ ಮಹಾಮೇಳಾವದಲ್ಲಿ ಪಾಲ್ಗೊಳ್ಳಲು ಬರುತ್ತಿದ್ದ ಶಿವಸೇನಾದ ಕೊಲ್ಹಾಪುರ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ದೇವನೆ ಹಾಗೂ ಇತರರನ್ನು ಕರ್ನಾಟಕ ಪೊಲೀಸರು ನಿಪ್ಪಾಣಿ ತಾಲ್ಲೂಕಿನ ಕುಗನೊಳ್ಳಿ ಚೆಕ್ಪೋಸ್ಟ್ನಲ್ಲಿ ತಡೆದು ವಾಪಸ್ ಕಳುಹಿಸಿದರು.