ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಮೇಶ್ ಕತ್ತಿ ಅಂತ್ಯಸಂಸ್ಕಾರಕ್ಕೆ ಮಠಾಧೀಶರು, ಗಣ್ಯರ ದಂಡು

Last Updated 7 ಸೆಪ್ಟೆಂಬರ್ 2022, 13:01 IST
ಅಕ್ಷರ ಗಾತ್ರ

ಬೆಲ್ಲದ ಬಾಗೇವಾಡಿ (ಬೆಳಗಾವಿ ಜಿಲ್ಲೆ): ಉಮೇಶ ಕತ್ತಿ ಅವರಅಂತ್ಯಸಂಸ್ಕಾರದಲ್ಲಿ ಭಾಗಿಯಾಗಲು ಮಠಾಧೀಶರು ಮತ್ತು ರಾಜಕಾರಣಿಗಳ ದಂಡು ನೆರೆದಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಶಾಸಕ ಬಿಎಸ್.ಯಡಿಯೂರಪ್ಪ, ಅವರ ಪುತ್ರ ಬಿ.ವೈ ವಿಜಯೇಂದ್ರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ ಕುಮಾರ್ ಕಟೀಲ, ಸಚಿವರಾದ ಆರ್. ಅಶೋಕ, ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ಸಿ.ಸಿ.ಪಾಟೀಲ, ಕೂಡಲಸಂಗಮದ ಜಯಮೃತ್ಯುಂಜಯ ಶ್ರೀಗಳು, ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯರು, ನಿಡಸೋಸಿ ಮಠದ ಶಿವಲಿಂಗೇಶ್ವರ ಶ್ರೀಗಳು, ಗದಗದ ಶ್ರೀಗಳು, ಶಾಸಕರಾದ ಸಿಟವೈರವಿ, ಎಚ್.ಡಿ.ರೇವಣ್ಣ, ರಮೇಶ ಜಾರಕಿಹೊಳಿ, ಸತೀಶ ಜಾರಕಿಹೊಳಿ, ಲಕ್ಷ್ಮಣ ಸವದಿ, ಬಸನಗೌಡ ಪಾಟೀಲ ಯತ್ನಾಳ, ಎಂ.ಬಿ.ಪಾಟೀಲ, ಅಭಯ ಪಾಟೀಲ, ಅರವಿಂದ ಬೆಲ್ಲದ, ಮಹಾಂತೇಶ ಕೌಜಲಗಿ, ಮಹಾಂತೇಶ ದೊಡಗೌಡರ, ಅನಿಲ ಬೆನಕೆ, ಲಕ್ಷ್ಮೀ ಹೆಬ್ಬಾಳಕರ್, ಅಂಜಲಿ ನಿಂಬಾಳಕರ, ಪಿ.ರಾಜೀವ, ದುರ್ಯೋಧನ ಐಹೋಳೆ, ಪ್ರಕಾಶ ಹುಕ್ಕೇರಿ, ಸಂಸದ ಈರಣ್ಣ ಕಡಾಡಿ, ಮಾಜಿ ಸಚಿವ ಎ.ಬಿ.ಪಾಟೀಲ, ಮಾಜಿ ಶಾಸಕರಾದ ರಾಜು ಕಾಗೆ, ಪೀರೋಜ್ ಶೆಟ್, ಶಶಿಕಾಂತ ನಾಯಿಕ, ಮಹಾಂತೇಶ ಕವಠಗಿಮಠ, ಅರವಿಂದ ಪಾಟೀಲ, ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಸುಮಾರು 50 ಜನ ಮಠಾಧಿಪತಿಗಳು ಮತ್ತು ಕೆಲವು ಮಾಜಿ ಸಚಿವರು, ಶಾಸಕರು ಮುಖಂಡರು, ಕತ್ತಿ ಕುಟುಂಬಸ್ಥರು ಭಾಗವಹಿಸಿದ್ದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ಹಾಗೂ ಹೆಚ್ವುವರಿ ವರಿಷ್ಠಾಧಿಕಾರಿ ಮಾಹಾನಿಂಗ ನಂದಗಾವಿ ನೇತೃತ್ವದಲ್ಲಿ ಡಿಎಸ್ಪಿಗಳು, ಸಿಪಿಐಗಳು ಹಾಗೂ ಸಿಬ್ಬಂದಿ ಬಿಗಿಯಾದ ಬಂದೋಬಸ್ತ್ಕಲ್ಪಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT