‘ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಂಬಂಧಿಸಿದಂತೆ ನಂಜುಂಡಪ್ಪ ವರದಿ ಬೈಬಲ್ ಇದ್ದಂತೆ. ಇಲ್ಲಿ ಏನೇನು ಅಭಿವೃದ್ಧಿ ಆಗಬೇಕು ಎಂಬ ಬಗ್ಗೆ ವರದಿಯಲ್ಲಿ ತಿಳಿಸಿದ್ದಾರೆ. ರಸ್ತೆಗಳು, ಆಸ್ಪತ್ರೆಗಳು, ಶಾಲೆಗಳು, ಕಾಲೇಜುಗಳು, ವಿಶ್ವವಿದ್ಯಾಲಯಗಳು, ಪಶು ಆಸ್ಪತ್ರೆ ಎಷ್ಟು ಆಗಬೇಕು ಎಂಬ ಬಗ್ಗೆಯೂ ತಿಳಿಸಿದ್ದಾರೆ. ಹೀಗಾಗಿ ಸಂಪೂರ್ಣವಾಗಿ ಅನುಷ್ಠಾಕ್ಕೆ ಬಂದರೆ ಉತ್ತರ ಕರ್ನಾಟಕ ಸಮಗ್ರವಾಗಿ ಅಭಿವೃದ್ಧಿ ಹೊಂದುತ್ತದೆ’ ಎಂದರು.