‘ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಪೂಜೆ ನೆರವೇರಿಸುವರು. ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅಧ್ಯಕ್ಷತೆ ವಹಿಸುವರು. ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವರಾದ ರಮೇಶ ಜಾರಕಿಹೊಳಿ, ಶ್ರೀಮಂತ ಪಾಟೀಲ, ಶಾಸಕರಾದ ಉಮೇಶ ಕತ್ತಿ, ಲಕ್ಷ್ಮಿ ಹೆಬ್ಬಾಳಕರ, ಅಭಯ ಪಾಟೀಲ, ಅನಿಲ ಬೆನಕೆ, ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ, ಮುಖಂಡರಾದ ಪ್ರಕಾಶ ಹುಕ್ಕೇರಿ, ಸಂಜಯ ಪಾಟೀಲ, ಮನೋಹರ ಕಿಣೇಕರ, ಮೊದಲಾದವರು ಭಾಗವಹಿಸಲಿದ್ದಾರೆ’ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.