ನಗರದಲ್ಲಿ ಸಚಿವರನ್ನು ಮಂಗಳವಾರ ಭೇಟಿ ನೀಡಿದ ಸಂಗಪ್ಪ ಅವರು, ‘ಪ್ಲಾಸ್ಟಿಕ್ ಬಳಕೆಯ ಮೇಲೆ ನಿರ್ಬಂಧ ಹೇರಲು ರೈಲ್ವೆ ಇಲಾಖೆ ಚಿಂತನೆ ನಡೆಸಿದ್ದನ್ನು ಕೇಳಿದ್ದೇನೆ. ಇದೇ ರೀತಿ, ಚಹಾ– ಕಾಫಿ ಸೇವಿಸಲು ಬಳಸುವ ಪ್ಲಾಸ್ಟಿಕ್ ಕಪ್ಗಳನ್ನೂ ನಿಷೇಧಿಸಬೇಕು. ಇದರ ಬದಲಾಗಿ ಪ್ರಯಾಣಿಕರಿಗೆ ಮಣ್ಣಿನ ಕುಡಿಕೆಗಳನ್ನು ಪೂರೈಸಲು ಕ್ರಮಕೈಗೊಳ್ಳಬೇಕು’ ಎಂದು ಕೋರಿದರು.