‘ಬಿಮ್ಸ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಇದ್ದು, ರೋಗಿಗಳು ಪರದಾಡುತ್ತಿರುವುದು ಗಮನಕ್ಕೆ ಬಂದಿದೆ. ಕ್ಷೇತ್ರದ ಜನರ ಬಳಿ ಅಭಿಪ್ರಾಯ ಸಂಗ್ರಹಿಸಿದ್ದೇನೆ. ಡಿಎಚ್ಒ ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ನನ್ನದೇ ಭಾಷೆಯಲ್ಲಿ ತರಾಟೆಗೆ ತಗೆದುಕೊಂಡಿದ್ದೇನೆ. ಜನರು ಆಸ್ಪತ್ರೆಗೆ ಜೀವ ಉಳಿಸಿಕೊಳ್ಳಲು ಬರುತ್ತಾರೆಯೇ ಹೊರತು ಕಳೆದುಕೊಳ್ಳಲಲ್ಲ ಎನ್ನುವುದನ್ನು ಮರೆಯಬೇಡಿ ಎಂದು ತಿಳಿಸಿದ್ದೇನೆ. ಜನರ ಪ್ರಾಣದೊಂದಿಗೆ ಚೆಲ್ಲಾಟ ಆಡಬೇಡಿ ಎಂದು ತಾಕೀತು ಮಾಡಿದ್ದೇನೆ’ ಎಂದು ಹೇಳಿದರು.