ಬೆಳಗಾವಿ: ‘ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರು ಅಮೆರಿಕಕ್ಕೆ ಹೋಗುವುದಾಗಿ ನನಗೆ ಮುಂಚೆಯೇ ಹೇಳಿದ್ದರು. ಆರು ತಿಂಗಳ ಹಿಂದೆಯೇ ಅವರ ಕಾರ್ಯಕ್ರಮ ನಿಗದಿಯಾಗಿದ್ದರಿಂದ, ವಿಧಾನ ಪರಿಷತ್ ಚುನಾವಣೆಯ ಪ್ರಚಾರದಲ್ಲಿ ಪಾಲ್ಗೊಳ್ಳಲು ಅವರಿಗೆ ಆಗಿಲ್ಲ. ಆದರೆ, ನಮ್ಮ ಅಭ್ಯರ್ಥಿಗಳು ಗೆಲ್ಲಲು ಏನು ಬೇಕೋ ಅದನ್ನು ಮಾಡಿದ್ದಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.