<p><strong>ಬೆಳಗಾವಿ:</strong> ‘ಉತ್ತರ ಕರ್ನಾಟಕದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಬೆಳಗಾವಿ-ಧಾರವಾಡ ನೇರ ರೈಲು ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿರುವುದು ಹರ್ಷ ಉಂಟು ಮಾಡಿದೆ’ ಎಂದು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ತಿಳಿಸಿದ್ದಾರೆ.</p>.<p>ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಬೆಳಗಾವಿ, ಧಾರವಾಡ ಹಾಗೂ ಹುಬ್ಬಳ್ಳಿ ಮಹಾನಗರಗಳು ವಾಣಿಜ್ಯ ಹಾಗೂ ಔದ್ಯೋಗಿಕವಾಗಿ ಶರವೇಗದಲ್ಲಿ ಬೆಳೆಯುತ್ತಿವೆ. ಈ ಭಾಗದ ಸಾರಿಗೆ ವ್ಯವಸ್ಥೆಯಲ್ಲೂ ಕ್ರಾಂತಿಕಾರಿ ಬದಲಾವಣೆಯಾದರೆ ಅಭಿವೃದ್ಧಿಗೆ ಮತ್ತಷ್ಟು ವೇಗಗೊಳ್ಳುವುದರಲ್ಲಿ ಸಂದೇಹವಿಲ್ಲ. ಇದರೊಂದಿಗೆ ಜನರ ಆರ್ಥಿಕ ಮಟ್ಟವೂ ಪ್ರಗತಿ ಹೊಂದುತ್ತದೆ’ ಎಂದಿದ್ದಾರೆ.</p>.<p>‘ಕಾಮಗಾರಿಯು ತ್ವರಿತವಾಗಿ ಪೂರ್ಣಗೊಳ್ಳಲಿ’ ಎಂದು ಆಶಿಸಿದ್ದಾರೆ.</p>.<p>‘ಇಲ್ಲಿವರೆಗೆ ಹಲವು ಮಂದಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದರು. ಅವರು ಇಲ್ಲಿನ ಜನರ ಆಶೋತ್ತರಗಳಿಗೆ ಸ್ಪಂದಿಸಿರಲಿಲ್ಲ. ಈಗಿನ ಸಚಿವ ಸುರೇಶ ಅಂಗಡಿ ಅವರು ಜನರ ದನಿಯಾಗಿ ಅನುಮೋದನೆ ಪಡೆದಿರುವುದು ಅಭಿನಂದನಾರ್ಹ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಉತ್ತರ ಕರ್ನಾಟಕದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಬೆಳಗಾವಿ-ಧಾರವಾಡ ನೇರ ರೈಲು ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿರುವುದು ಹರ್ಷ ಉಂಟು ಮಾಡಿದೆ’ ಎಂದು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ತಿಳಿಸಿದ್ದಾರೆ.</p>.<p>ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಬೆಳಗಾವಿ, ಧಾರವಾಡ ಹಾಗೂ ಹುಬ್ಬಳ್ಳಿ ಮಹಾನಗರಗಳು ವಾಣಿಜ್ಯ ಹಾಗೂ ಔದ್ಯೋಗಿಕವಾಗಿ ಶರವೇಗದಲ್ಲಿ ಬೆಳೆಯುತ್ತಿವೆ. ಈ ಭಾಗದ ಸಾರಿಗೆ ವ್ಯವಸ್ಥೆಯಲ್ಲೂ ಕ್ರಾಂತಿಕಾರಿ ಬದಲಾವಣೆಯಾದರೆ ಅಭಿವೃದ್ಧಿಗೆ ಮತ್ತಷ್ಟು ವೇಗಗೊಳ್ಳುವುದರಲ್ಲಿ ಸಂದೇಹವಿಲ್ಲ. ಇದರೊಂದಿಗೆ ಜನರ ಆರ್ಥಿಕ ಮಟ್ಟವೂ ಪ್ರಗತಿ ಹೊಂದುತ್ತದೆ’ ಎಂದಿದ್ದಾರೆ.</p>.<p>‘ಕಾಮಗಾರಿಯು ತ್ವರಿತವಾಗಿ ಪೂರ್ಣಗೊಳ್ಳಲಿ’ ಎಂದು ಆಶಿಸಿದ್ದಾರೆ.</p>.<p>‘ಇಲ್ಲಿವರೆಗೆ ಹಲವು ಮಂದಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದರು. ಅವರು ಇಲ್ಲಿನ ಜನರ ಆಶೋತ್ತರಗಳಿಗೆ ಸ್ಪಂದಿಸಿರಲಿಲ್ಲ. ಈಗಿನ ಸಚಿವ ಸುರೇಶ ಅಂಗಡಿ ಅವರು ಜನರ ದನಿಯಾಗಿ ಅನುಮೋದನೆ ಪಡೆದಿರುವುದು ಅಭಿನಂದನಾರ್ಹ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>