‘ಬರದ ಗಾಯದ ಮೇಲೆ ಲದ್ದಿ ಹುಳು ಬರೆ’ ಶೀರ್ಷಿಕೆಯಲ್ಲಿ ‘ಪ್ರಜಾವಾಣಿ’ಯಲ್ಲಿ ಸೋಮವಾರ ಪ್ರಕಟವಾಗಿದ್ದ ವರದಿಯಿಂದ ಎಚ್ಚೆತ್ತ ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಿಲಾನಿ ಮೊಕಾಶಿ, ತಮ್ಮ ಅಧಿಕಾರಿಗಳೊಂದಿಗೆ ಜಮೀನುಗಳಿಗೆ ತೆರಳಿ ರೈತರಿಂದ ಮಾಹಿತಿ ಪಡೆದರು. ಕೀಟಗಳಿಂದ ಆಗುವ ಬಾಧೆಯನ್ನು ನಿಯಂತ್ರಣಕ್ಕೆ ತರಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಲಹೆ ನೀಡಿದರು. ಅಭಿಯಾನದ ರೀತಿಯಲ್ಲಿ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.