<p><strong>ಹುಕ್ಕೇರಿ</strong>: ‘ವಿದ್ಯಾರ್ಥಿಗಳ ಜ್ಞಾನಾಭಿವೃದ್ಧಿಗೆ ಪ್ರಜಾವಾಣಿ ಪೂರಕವಾಗಿದೆ. ಪ್ರತಿದಿನ ಪ್ರಜಾವಾಣಿ ಓದುವುದರಿಂದ ನಮಗೆ ಪ್ರಸ್ತುತ ವಿದ್ಯಮಾನ ತಿಳಿದುಕೊಳ್ಳಲು ಹಾಗೂ ಜ್ಞಾನ ವೃದ್ಧಿಸಿಕೊಳ್ಳಲು, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆಯಲು ಸಹಕಾರಿಯಾಗಲಿದೆ’ ಎಂದು .ನೀಲಕಂಠ ಭೂಮಣ್ಣವರ ಹೇಳಿದರು.</p>.<p>ತಾಲ್ಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಾಶ್ಚಾಪುರದಲ್ಲಿ ಇತಿಹಾಸ ವಿಭಾಗದ ಅಡಿಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಕುರಿತು ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.</p>.<p>‘ನಾವೆಲ್ಲ ವಿದ್ಯಾರ್ಥಿ ಜೀವನದಲ್ಲಿ ಪ್ರಜಾವಾಣಿ ಓದುತ್ತಿದ್ದೇವು. ಕನ್ನಡ ಪತ್ರಿಕೆಗಳಲ್ಲಿ ಪ್ರಜಾವಾಣಿ ವಿಶ್ವಾಸಾರ್ಹ ಪತ್ರಿಕೆಯಾಗಿದೆ’ ಎಂದರು.</p>.<p>‘ಇಂದಿನ ವಿದ್ಯುನ್ಮಾನ, ಅಂತರ್ಜಾಲ, ತಂತ್ರಜ್ಞಾನದ ಸಂದರ್ಭದಲ್ಲಿಯೂ ಪ್ರಜಾವಾಣಿ ತನ್ನ ಕನ್ನಡ ನಾಡಿನ ಜನರ ವಿಶ್ವಾಸ ಉಳಿಸಿಕೊಂಡಿದೆ. ಹಾಗಾಗಿ ಪ್ರತಿದಿನ ವಿದ್ಯಾರ್ಥಿಗಳು ಪತ್ರಿಕೆ ಕೊಂಡು ಓದಬೇಕು’ ಎಂದು ಸಲಹೆ ನೀಡಿದರು.</p>.<p>ಇತಿಹಾಸ ವಿಭಾಗದ ಉಪನ್ಯಾಸಕ ವೀರೇಶ್ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗೆ ಪ್ರಜಾವಾಣಿ ದಿನಪತ್ರಿಕೆಯ ಮಹತ್ವ ಕುರಿತು ವಿತರಿಸಿದರು. ಪತ್ರಿಕೆಯಲ್ಲಿ ಬರುವ ವಿಷಯದ ಕುರಿತು ವಿಶೇಷ ತಿಳಿವಳಿಕೆ ನೀಡಿದರು.</p>.<p>ಎಲ್ಲ ವಿದ್ಯಾರ್ಥಿಗಳಿಗೆ ಇತಿಹಾಸ ವಿಭಾಗದಿಂದ ಪ್ರಜಾವಾಣಿ ಪತ್ರಿಕೆ ವಿತರಿಸಿ ಮೊದಲನೆ ಪುಟದಿಂದ ಕೊನೆಯ ಪುಟದವರಿಗೆ ಯಾವ ವಿಷಯ ಒಳಗೊಂಡಿರುತ್ತದೆ. ಅವುಗಳನ್ನ ಯಾವ ರೀತಿ ನೋಟ್ಸ್ ಮಾಡಿಕೊಳ್ಳಬೇಕು. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ತೆಗೆದುಕೊಳ್ಳಲು ಪ್ರಜಾವಾಣಿ ದಿನಪತ್ರಿಕೆ ಹೇಗೆ ಅನುಕೂಲವಾಗಿದೆ ಎಂದು ವಿವರಿಸಿದರು.</p>.<p>ಬಿ.ಎ, ಬಿ.ಕಾಂ ಮತ್ತು ಬಿ.ಎಸ್.ಸಿ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಮಾರ್ಗದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ಪ್ರಾಚಾರ್ಯ, ಎಲ್ಲ ವಿಭಾಗದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಕ್ಕೇರಿ</strong>: ‘ವಿದ್ಯಾರ್ಥಿಗಳ ಜ್ಞಾನಾಭಿವೃದ್ಧಿಗೆ ಪ್ರಜಾವಾಣಿ ಪೂರಕವಾಗಿದೆ. ಪ್ರತಿದಿನ ಪ್ರಜಾವಾಣಿ ಓದುವುದರಿಂದ ನಮಗೆ ಪ್ರಸ್ತುತ ವಿದ್ಯಮಾನ ತಿಳಿದುಕೊಳ್ಳಲು ಹಾಗೂ ಜ್ಞಾನ ವೃದ್ಧಿಸಿಕೊಳ್ಳಲು, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆಯಲು ಸಹಕಾರಿಯಾಗಲಿದೆ’ ಎಂದು .ನೀಲಕಂಠ ಭೂಮಣ್ಣವರ ಹೇಳಿದರು.</p>.<p>ತಾಲ್ಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಾಶ್ಚಾಪುರದಲ್ಲಿ ಇತಿಹಾಸ ವಿಭಾಗದ ಅಡಿಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಕುರಿತು ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.</p>.<p>‘ನಾವೆಲ್ಲ ವಿದ್ಯಾರ್ಥಿ ಜೀವನದಲ್ಲಿ ಪ್ರಜಾವಾಣಿ ಓದುತ್ತಿದ್ದೇವು. ಕನ್ನಡ ಪತ್ರಿಕೆಗಳಲ್ಲಿ ಪ್ರಜಾವಾಣಿ ವಿಶ್ವಾಸಾರ್ಹ ಪತ್ರಿಕೆಯಾಗಿದೆ’ ಎಂದರು.</p>.<p>‘ಇಂದಿನ ವಿದ್ಯುನ್ಮಾನ, ಅಂತರ್ಜಾಲ, ತಂತ್ರಜ್ಞಾನದ ಸಂದರ್ಭದಲ್ಲಿಯೂ ಪ್ರಜಾವಾಣಿ ತನ್ನ ಕನ್ನಡ ನಾಡಿನ ಜನರ ವಿಶ್ವಾಸ ಉಳಿಸಿಕೊಂಡಿದೆ. ಹಾಗಾಗಿ ಪ್ರತಿದಿನ ವಿದ್ಯಾರ್ಥಿಗಳು ಪತ್ರಿಕೆ ಕೊಂಡು ಓದಬೇಕು’ ಎಂದು ಸಲಹೆ ನೀಡಿದರು.</p>.<p>ಇತಿಹಾಸ ವಿಭಾಗದ ಉಪನ್ಯಾಸಕ ವೀರೇಶ್ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗೆ ಪ್ರಜಾವಾಣಿ ದಿನಪತ್ರಿಕೆಯ ಮಹತ್ವ ಕುರಿತು ವಿತರಿಸಿದರು. ಪತ್ರಿಕೆಯಲ್ಲಿ ಬರುವ ವಿಷಯದ ಕುರಿತು ವಿಶೇಷ ತಿಳಿವಳಿಕೆ ನೀಡಿದರು.</p>.<p>ಎಲ್ಲ ವಿದ್ಯಾರ್ಥಿಗಳಿಗೆ ಇತಿಹಾಸ ವಿಭಾಗದಿಂದ ಪ್ರಜಾವಾಣಿ ಪತ್ರಿಕೆ ವಿತರಿಸಿ ಮೊದಲನೆ ಪುಟದಿಂದ ಕೊನೆಯ ಪುಟದವರಿಗೆ ಯಾವ ವಿಷಯ ಒಳಗೊಂಡಿರುತ್ತದೆ. ಅವುಗಳನ್ನ ಯಾವ ರೀತಿ ನೋಟ್ಸ್ ಮಾಡಿಕೊಳ್ಳಬೇಕು. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ತೆಗೆದುಕೊಳ್ಳಲು ಪ್ರಜಾವಾಣಿ ದಿನಪತ್ರಿಕೆ ಹೇಗೆ ಅನುಕೂಲವಾಗಿದೆ ಎಂದು ವಿವರಿಸಿದರು.</p>.<p>ಬಿ.ಎ, ಬಿ.ಕಾಂ ಮತ್ತು ಬಿ.ಎಸ್.ಸಿ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಮಾರ್ಗದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ಪ್ರಾಚಾರ್ಯ, ಎಲ್ಲ ವಿಭಾಗದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>